ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಬೆಂಗಳೂರು(Bangalore) : ಕೆಲ ದಿನಗಳ ಹಿಂದೆ ಬಸ್ ಪ್ರಯಾಣ ದರವನ್ನ ಹೆಚ್ಚಿಸಿದ ರಾಜ್ಯ ಸರ್ಕಾರ(State Government), ಇದೀಗ ಮದ್ಯಪ್ರಿಯರಿಗೆ ಶಾಕ್ ನೀಡಿದೆ. ಮದ್ಯದ ದರವನ್ನು , 10 ರೂ.ನಿಂದ 45 ರೂ.ವರೆಗೂ ಬೆಲೆ ಏರಿಸಿದೆ.
ಪರಿಷ್ಕೃತ ದರ ಸೋಮವಾರದಿಂದಲೇ ಜಾರಿಯಾಗಿದೆ. ಆಶ್ಚರ್ಯವೆಂದರೆ ಒಂದು ವರ್ಷದಲ್ಲಿ ಬಿಯರ್ ಬೆಲೆ ಮೂರರಷ್ಟು ಹೆಚ್ಚಾಗಿದೆ. ಸಾಧಾರಣವಾಗಿ ಬಜೆಟ್ನಲ್ಲಿ ಮದ್ಯದ ಮೇಲೆ ಅಬಕಾರಿ ತೆರಿಗೆ(Exice Tax) ಹಾಕಲಾಗುತ್ತದೆ. ಆದರೆ ಈ ಬಾರಿ ಬಜೆಟ್(Budget) ಮಂಡನೆಯಾಗುವ ಮೊದಲೇ ಬಿಯರ್ ದರ ಏರಿಕೆಯಾಗಿದೆ.
ಈ ಆರ್ಥಿಕ ವರ್ಷದ ಮೊದಲ 9 ತಿಂಗಳಲ್ಲಿ ಅಬಕಾರಿಯಿಂದ ನಿರೀಕ್ಷಿತ ಆದಾಯ ಬಾರದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ(State Government) ಬಜೆಟ್ಗೂ ಮುನ್ನವೇ ಬಿಯರ್ ದರ ಏರಿಸಿದೆ. ಈಗಾಗಲೇ ರಾಜ್ಯ ಸರ್ಕಾರವು ವಿವಿಧ ವಸ್ತುಗಳ ಹಾಗೂ ಸೇವೆಗಳ ಬೆಲೆಯನ್ನು ಹೆಚ್ಚಳ ಮಾಡುತ್ತಿದೆ. ಇದರ ನಡುವೆ ಮದ್ಯ ಪ್ರಿಯರಿಗೂ ದೊಡ್ಡ ಶಾಕ್ ನೀಡಿದೆ.
ಇನ್ನು ಬಿಯರ್ ಬೆಲೆ ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ಇದಕ್ಕೆ ಕಂಪನಿಗಳು ಹಾಗೂ ಮದ್ಯ ಪ್ರಿಯರು ವಿರೋಧ ವ್ಯಕ್ತಪಡಿಸಿದ್ದಾರೆ. ಈಗಾಗಲೇ ದೇಶದ ವಿವಿಧ ರಾಜ್ಯಗಳಿಗೆ ಹೋಲಿಕೆ ಮಾಡಿದರೆ, ಬಿಯರ್ ಬೆಲೆ ಕರ್ನಾಟಕದಲ್ಲಿ ಅತೀ ಹೆಚ್ಚಾಗಿದೆ.
ಬಿಯರ್ ದರ ಪರಿಷ್ಕರಿಸಲು ಕಳೆದ 2024ರ ಆಗಸ್ಟ್ನಲ್ಲಿಯೇ ಕರಡು ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ, ನಾನಾ ಕಾರಣಗಳಿಂದ ದರ ಪರಿಷ್ಕರಣೆ ಕಡತಕ್ಕೆ ಮುಖ್ಯಮಂತ್ರಿಗಳು ಸಹಿ ಹಾಕಿರಲಿಲ್ಲ. ಈಗ, ಮುಖ್ಯಮಂತ್ರಿಗಳು ದರ ಏರಿಕೆಗೆ ಸಮ್ಮತಿಸಿದ ಹಿನ್ನೆಲೆಯಲ್ಲಿ ಸರ್ಕಾರ ಆದೇಶ ಹೊರಡಿಸಿದೆ.
ಬ್ರೂವರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ(Bluevars Association of India) ಪ್ರೀಮಿಯಂ ಬಿಯರ್(Premium Beer) ಬೆಲೆ ಏರಿಕೆಗೆ ತಕರಾರು ತೆಗೆದಿದೆ. ದೇಶದಲ್ಲೇ ಕರ್ನಾಟಕದಲ್ಲಿ ಅತಿ ಹೆಚ್ಚಿನ ಬೆಲೆಗೆ ಬಿಯರ್ ಮಾರಾಟವಾಗುತ್ತಿದೆ. ಬೆಲೆ ಏರಿಕೆಯಿಂದ ಬಿಯರ್ ಮಾರಾಟ ಕಡಿಮೆಯಾಗಿದೆ ಎಂದು ಹೇಳಲಾಗಿದೆ.
ಕಳೆದ ಎರಡು ವರ್ಷಗಳಲ್ಲಿ ಕರ್ನಾಟಕದಲ್ಲಿ (Karnataka) ಬಿಯರ್ ಮಾರಾಟ ಎರಡು ಪಟ್ಟು ಹೆಚ್ಚಾಗಿದೆ. ಕೋವಿಡ್ ನಂತರದ ಅವಧಿಯಲ್ಲಿ ಗ್ರಾಹಕರ ನಡವಳಿಕೆಯಲ್ಲಿನ ಬದಲಾವಣೆ ಮತ್ತು ಬೇಸಿಗೆಯ ತಾಪಮಾನದಲ್ಲಿನ ಏರಿಕೆ ಕೂಡ ಬಿಯರ್ ಬೇಡಿಕೆ ಹೆಚ್ಚಲು ಕಾರಣ ಎನ್ನಲಾಗಿವೆ.
ಯಾವುದೇ ಮಾದರಿಯ ಬಿಯರ್ ಬಾಟಲ್ ತೆಗೆದುಕೊಂಡರೂ 10 ರೂಪಾಯಿ ದರ ಹೆಚ್ಚಳವಾಗಲಿದೆ ಎಂದು ಅಂದಾಜಿಸಲಾಗಿದೆ. ಕಳೆದ ವರ್ಷದ ಅಂತ್ಯದಲ್ಲಿ ಕರ್ನಾಟಕದಲ್ಲಿ ಲಿಕ್ಕರ್ ಬೆಲೆಗಳನ್ನು ಪರಿಷ್ಕರಣೆ ಮಾಡಲಾಗಿತ್ತು. ಆಗಸ್ಟ್ 27ರಿಂದ ಹೊಸ ದರ ಜಾರಿಯಾಗಿತ್ತು. ಹೆಚ್ಚಿನ ಪ್ರಮಾಣದಲ್ಲಿ ಮಾರಾಟವಾಗುವ ಪ್ರೀಮಿಯಂ ಬ್ರಾಂಡ್ಗಳ ದರದಲ್ಲಿ ಸ್ವಲ್ಪ ಮಟ್ಟಿಗೆ ಇಳಿಕೆಯಾಗಿತ್ತು.ಪ್ರಮುಖವಾಗಿ ರಮ್, ವಿಸ್ಕಿ, ಬ್ರಾಂದಿಗಳ ಬೆಲೆ ಕಡಿಮೆಯಾಗಿತ್ತು.
ಮದ್ಯದ ದರ ಪರಿಷ್ಕರಣೆಯಾಗಿದ್ದರಿಂದ ಮದ್ಯ ತಯಾರಕರು ಬ್ರಾಂಡ್ಗಳನ್ನು ಮಾರುಕಟ್ಟೆಗೆ ಪೂರೈಸುತ್ತಿಲ್ಲ. ದರ ಹೆಚ್ಚು ಕಡಿಮೆಯಾದರೆ ಮತ್ತೆ ಲೇಬಲ್ ಬದಲಾಯಿಸಬೇಕು. ಹಾಗಾಗಿ ಅವರು ಪೂರೈಕೆ ಸ್ಥಗಿತಗೊಳಿಸಿರುವುದರಿಂದ ಕೊರತೆ ಎದುರಾಗಿದೆ. ಬಾರ್, ರೆಸ್ಟೋರೆಂಟ್, ರೀಟೇಲ್ ಮಳಿಗೆಗಳು ಸೇರಿ ಬಹುತೇಕ ಮದ್ಯದ ಅಂಗಡಿಗಳಲ್ಲಿ ಪ್ರೀಮಿಯಂ ಬ್ರಾಂಡ್ ಬಿಯರ್ಗಳೇ ದೊರಕುತ್ತಿಲ್ಲವಂತೆ.
ಇದನ್ನು ಓದಿ : ಅಂದು ಕರ್ನಾಟಕದಲ್ಲಿಯೇ ಐಎಎಸ್ ಅಧಿಕಾರಿಯಾಗಿ ಸೇವೆ. ಇಂದು ನಾಗಾ ಸಾಧು !
ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣ. ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ.