ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news)ಕೋಲಾರ (Kolara): ಚಾಲೆಂಜ್ ಗೆಲ್ಲೋದಕ್ಕಾಗಿ ಯುವಕನೋರ್ವ ಬರೋಬ್ಬರಿ ಐದು ಬಾಟಲಿ ಮದ್ಯ(Liquor) ಸೇವಿಸಿ ಮೃತಪಟ್ಟ ಘಟನೆ ಕೋಲಾರ(Kolar) ಜಿಲ್ಲೆಯ ಮುಳಬಾಗಿಲು(Mulabagilu) ತಾಲ್ಲೂಕಿನ ಪೂಜಾರಹಳ್ಳಿ ಗ್ರಾಮದಲ್ಲಿ ನಡೆದಿದೆ.

21 ವರ್ಷದ ಕಾರ್ತಿಕ್  ಜೂಜಾಟದಲ್ಲಿ ಮೃತಪಟ್ಟ ಯುವಕ. ಈತ ಒಂದು ವರ್ಷದ ಹಿಂದಷ್ಟೇ ಮದುವೆಯಾಗಿದ್ದ ಎನ್ನಲಾಗಿದೆ.

ಐದು ಬಾಟಲ್ ಮದ್ಯಕ್ಕೆ ಒಂದೇ ಒಂದು ಹನಿ ನೀರು ಬೆರೆಸದೇ ಕಚ್ಚಾ ಕುಡಿಯುವುದಾಗಿ ಕಾರ್ತಿಕ್ 10 ಸಾವಿರ ರೂ. ಹಣಕ್ಕೆ ಬಾಜಿ ಕಟ್ಟಿದ್ದಾನೆ. ಇದೇ ಪೂಜಾರಹಳ್ಳಿ ಗ್ರಾಮದ ವೆಂಕಟರಡ್ಡಿ, ಸುಬ್ರಮಣಿ ಮತ್ತು ಇತರೆ ಮೂವರೊಂದಿಗೆ ಬೆಟ್ಟಿಂಗ್ ಕಟ್ಟಿದ್ದ. ಅದರಂತೆ ಸ್ವಲ್ಲೂ ನೀರು ಹಾಕಿಕೊಳ್ಳದೇ ಬರೋಬ್ಬರಿ ಐದು ಬಾಟಲಿ ಮದ್ಯವನ್ನು ಸೇವಿಸಿದ್ದಾನೆ. ಆದ್ರೆ, ಮದ್ಯ ದೇಹದೊಳಗೆ ಸೇರಿಕೊಳ್ಳುತ್ತಿದ್ದಂತೆಯೇ ಕಾರ್ತಿಕ್ ಆರೋಗ್ಯದಲ್ಲಿ ಏರುಪೇರಾಗಿದೆ.

ಇದೆ ವೇಳೆ ಸ್ನೇಹಿತರ ಬಳಿ ನನ್ನನ್ನು ಉಳಿಸಿ ಎಂದು ಕಣ್ಣೀರಿಟ್ಟಿದ್ದಾನೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಆದರೆ ಕಾರ್ತಿಕ್ ದೇಹ ಚಿಕಿತ್ಸೆಗೂ ಸ್ಪಂದಿಸದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.

ಇದನ್ನು ಓದಿ: ಯುದ್ಧ ಭೀತಿ. ಪಾಕಿಸ್ತಾನದ ಸಾವಿರಾರು ಸಂಖ್ಯೆಯ ಸೈನಿಕರು, ಸೇನಾಧಿಕಾರಿಗಳ ರಾಜೀನಾಮೆ.

ಕಾಶ್ಮೀರ ಘಟನೆ ಹಿನ್ನಲೆಯಲ್ಲಿ ಸಂಗೀತ ಕಾರ್ಯಕ್ರಮ ರದ್ದುಗೊಳಿಸಿದ ಗಾಯಕರು. ಕರಾವಳಿ ಉತ್ಸವದ ಕಥೆ ಏನು?

ಕೆಜಿ ಹಳ್ಳಿ-ಡಿಜೆ ಹಳ್ಳಿ ಪ್ರಕರಣದ  ಆರೋಪಿ ಬಂಧನ