ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಬೆಂಗಳೂರು (Bangaluru) : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ನಿಂದ(Micro Finance) ಆಗುತ್ತಿರುವ ಅನ್ಯಾಯಗಳಿಗೆ ತಡೆ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ(State Government) ಸಲ್ಲಿಸಿದ ಸುಗ್ರೀವಾಜ್ಞೆಗೆ ರಾಜ್ಯಪಾಲ(Governer) ಥಾವರ್ ಚಂದ್ ಗೆಹ್ಲೋಟ್(Thaverchand Ghelot) ಅಂಕಿತ ಹಾಕಿದ್ದಾರೆ.
ಜೊತೆಗೆ ಹಲವು ಸಲಹೆಗಳನ್ನು ನೀಡಿದ್ದು, ಈ ಬಗ್ಗೆ ಮುಂದಿನ ಅಧಿವೇಶನದಲ್ಲಿ ಚರ್ಚಿಸುವಂತೆ ಅವರು ಸೂಚಿಸಿದ್ದಾರೆ. ರಾಜ್ಯ ಸರ್ಕಾರ ಕರ್ನಾಟಕದಲ್ಲಿ ಆಗುತ್ತಿರುವ ಮೈಕ್ರೋ ಫೈನಾನ್ಸ್(Micro Finance) ಕಿರುಕುಳ ತಡೆಯಲು ಸುಗ್ರೀವಾಜ್ಞೆ ಮೊರೆ ಹೋಗಿತ್ತು. ಕಠಿಣ ಕಾನೂನು ರೂಪಿಸಿ ರಾಜ್ಯಪಾಲರಿಗೆ ಸಲ್ಲಿಸಲಾಗಿತ್ತು. ಆದರೆ ರಾಜ್ಯಪಾಲರು ಅಂಕಿತಕ್ಕೆ ನಿರಾಕರಿಸಿ ವಾಪಸ್ ಕಳಿಸಿದ್ದರು. ಬಜೆಟ್ ಅಧಿವೇಶನದಲ್ಲಿ ಮೈಕ್ರೋ ಫೈನಾನ್ಸ್(Micro Finance) ಸುಗ್ರೀವಾಜ್ಞೆ ಸಾಧಕ ಬಾಧಕದ ಬಗ್ಗೆ ಚರ್ಚೆ ನಡೆಸಿ ಅಂತಾ ಹೇಳಿದ್ದ ರಾಜ್ಯಪಾಲರು, ಪೊಲೀಸ್ ಕ್ರಮದ ಬಗ್ಗೆ ಅಸಮಧಾನ ಹೊರಹಾಕಿದ್ದರು.
ರಾಜ್ಯಪಾಲರು ತಪ್ಪುಗ್ರಹಿಕೆಯಿಂದ ನಿರ್ಧಾರ ತೆಗೆದುಕೊಂಡಿದ್ದಾರೆಂದು ಸರ್ಕಾರ ಮತ್ತೊಮ್ಮೆ ರಾಜ್ಯಪಾಲರ ಅಂಗಳಕ್ಕೆ ಸುಗ್ರೀವಾಜ್ಞೆ ಕರಡು ರವಾನೆ ಮಾಡಿತ್ತು. ಈ ಭಾರಿ ಸುಗ್ರೀವಾಜ್ಞೆಯಲ್ಲಿ ಯಾವುದೇ ಬದಲಾವಣೆ ಮಾಡದೆಯೇ ಕರಡು ರವಾನಿಸಲಾಗಿತ್ತು. ಅತಿ ಅಗತ್ಯತೆ ಕಾರಣಕ್ಕೆ ಸುಗ್ರೀವಾಜ್ಞೆಯನ್ನು ಅನುಮೋದಿಸಲು ಸರ್ಕಾರ ಮನವಿ ಮಾಡಿಕೊಂಡಿತ್ತು.
ಈ ಬಗ್ಗೆ ಟ್ವೀಟ್ ಮಾಡಿದ ಸಿಎಂ ಸಿದ್ದರಾಮಯ್ಯ(CM Siddaramaiha), ಮೈಕ್ರೋ ಫೈನಾನ್ಸ್ ಕಂಪೆನಿಗಳ ಕಿರುಕುಳ ತಡೆಯಲು ರೂಪಿಸಲಾದ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ ದೊರೆತಿದೆ. ಈ ಕಾನೂನು ಶೀಘ್ರದಲ್ಲಿ ಜಾರಿಗೆ ಬಂದು ಮೈಕ್ರೋ ಫೈನಾನ್ಸ್ಗಳ ನಿಯಮ ಬಾಹಿರ ಸಾಲ ವಸೂಲಿ, ಕಿರುಕುಳಗಳ ವಿರುದ್ಧ ಜನರಿಗೆ ರಕ್ಷಣೆ ನೀಡಲಿದೆ. ಮೈಕ್ರೋ ಫೈನಾನ್ಸ್ಗಳ ಕಿರುಕುಳಕ್ಕೆ ಹೆದರಿ ಯಾರೊಬ್ಬರೂ ದುಡುಕಿನ ನಿರ್ಧಾರ ಕೈಗೊಳ್ಳಬೇಡಿ ನಿಮ್ಮ ಜೊತೆ ನಮ್ಮ ಸರ್ಕಾರ ಇದೆ ಎಂದು ಸಿಎಂ ತಿಳಿಸಿದ್ದಾರೆ.
ಇದನ್ನು ಓದಿ : ಶರಾವತಿ ಸೇತುವೆ ಮೇಲೆ ಅಪಘಾತ. ಬೈಕ್ ಸವಾರ ಸಾವು.
ಎಟಿಎಂ ಕಳ್ಳತನಕ್ಕೆ ವಿಫಲ ಯತ್ನ. ಸೈರನ್ ಗೆ ಎದ್ದು ಬಿದ್ದು ಕಾಲ್ಕಿತ್ತ ಕಳ್ಳರು.
ಪದೇಪದೇ ಫೈನ್ ಕಟ್ಟುವ ಪತ್ನಿ. ಇದು ಗಂಡ ಮಾಡಿದ ಕಿತಾಪತಿ.
ಮರಳು ದಂಧೆ ತಡೆಯಲು ಹೋದ ಮಹಿಳಾ ಅಧಿಕಾರಿಗೆ ಜೀವ ಬೆದರಿಕೆ. ಮೂವರು ಆರೆಸ್ಟ್.