ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) : ತಿರುವನಂತಪುರ(Tiruvanantapura): ನವಜಾತ ಅವಳಿ ಮಕ್ಕಳು ಮತ್ತು ತಾಯಿಯನ್ನು(Childrens and Mother) ಉಸಿರು ಕಟ್ಟಿಸಿ ಕೊಂದು ತಲೆ ಮರೆಸಿಕೊಂಡಿದ್ದ ಇಬ್ಬರು ಮಾಜಿ ಸೈನಿಕರನ್ನು 19 ವರ್ಷಗಳ ನಂತರ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಯಾವುದೇ ಕ್ರೈಮ್ ಥ್ರಿಲ್ಲರ್ ಸಿನೆಮಾಗೆ(Crime Thriller Cinema) ಕಡಿಮೆ ಇಲ್ಲದ ಕೇರಳದಲ್ಲಿ ನಡೆದಿರುವ ಈ ಅಪರಾಧ ಕೃತ್ಯವನ್ನ ಪೊಲೀಸರು ಬೇಧಿಸಿದ್ದಾರೆ. ಕಳೆದ ಮೂರು ತಿಂಗಳಿನಿಂದ ಸಿಬಿಐ(CBI) ಮತ್ತು ಕೇರಳ ಪೊಲೀಸರ ತನಿಖಾ ತಂಡ(Keral Police Investigation Team) 10,000ಕ್ಕೂ ಅಧಿಕ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಜಾಲಾಡಿ ಇಬ್ಬರು ಆರೋಪಿಗಳನ್ನು ಬಲೆಗೆ ಕೆಡವಿದೆ.
ಕೇರಳದ ಕೊಲ್ಲಂ (Kollam) ಜಿಲ್ಲೆಯ ಅಂಚಲ್ ಸಮೀಪದ ಯೆರಮ್ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ಫೆಬ್ರುವರಿ 10ರಂದು 2006ರಲ್ಲಿ ರಜನಿ ಎಂಬ ಮಹಿಳೆ ಹಾಗೂ ನವಜಾತ ಅವಳಿ ಹೆಣ್ಣು ಮಕ್ಕಳ ಹತ್ಯೆಯಾಗಿತ್ತು. ಅವಳಿ ಮಕ್ಕಳ ಜನ್ಮ ಪ್ರಮಾಣಪತ್ರ ಪಡೆಯಲು ತೆರಳಿದ್ದ ರಜನಿ ತಾಯಿ ಪಂಚಾಯತ್ ಕಚೇರಿಯಿಂದ ಮರಳಿದಾಗ ಮೂರು ಮೃತದೇಹ ಮನೆಯಲ್ಲಿ ಬಿದ್ದಿದ್ದವು. ಅಂಚಲ್ ಮೂಲದ ದಿವಿಲ್ ಕುಮಾರ್ ಬಿ ಎಂಬಾತ ಆಗ 28 ವರ್ಷದವನಾಗಿದ್ದು, ಭಾರತೀಯ ಸೇನೆಯ 45 ಎಡಿ ರೆಜಿಮೆಂಟ್ನಲ್ಲಿ ಪಠಾಣ್ಕೋಟ್ನಲ್ಲಿ (Pathankot) ಕಾರ್ಯನಿರ್ವಹಿಸುತ್ತಿದ್ದ. ಈತ ರಜನಿ ಜತೆ ಪ್ರೇಮ ಸಂಬಂಧ ಹೊಂದಿದ್ದ ವಿಚಾರ ತನಿಖೆಯಿಂದ ತಿಳಿದು ಬಂದಿತ್ತು. 2006ರ ಜನವರಿ 24ರಂದು ಮದುವೆಗೂ ಮೊದಲೇ ಅವಳಿ ಮಕ್ಕಳು ಜನಿಸಿದ ಬಳಿಕ ಆತ ಮಹಿಳೆಯಿಂದ ಅಂತರ ಕಾಯ್ದುಕೊಂಡಿದ್ದ.
ಘಟನೆಗೂ ಮುನ್ನ ಅವಿವಾಹಿತ ರಜನಿ ತಾಯಿ ಕೇರಳ ಮಹಿಳಾ ಆಯೋಗವನ್ನು (Keral Women Commission) ಸಂಪರ್ಕಿಸಿದ್ದರು. ಆಗ ಅವಳಿ ಮಕ್ಕಳ ಪಿತೃತ್ವ ಪರೀಕ್ಷೆಯನ್ನು ನಡೆಸುವಂತೆ ಆಯೋಗ ಆದೇಶ ನೀಡಿತ್ತು. ಇದರಿಂದ ಹತಾಶನಾದ ದಿವಿಲ್ ಕುಮಾರ್, ಹತ್ಯೆಯ ಸಂಚು ರೂಪಿಸಿದ್ದ. ದಿವಿಲ್ ಕುಮಾರ್ ಸಹೋದ್ಯೋಗಿ ಕಣ್ಣೂರು ಜಿಲ್ಲೆಯ ಶ್ರೀಕಂಠಪುರಂ ನಿವಾಸಿ ಪಿ ರಾಜೇಶ್ (33) ಎಂಬಾತ ರಜನಿ ಮತ್ತು ಆಕೆಯ ತಾಯಿ ಜತೆ ಸ್ನೇಹ ಸಂಪಾದಿಸಿ, ರಜನಿಯನ್ನು ವಿವಾಹವಾಗುವಂತೆ ದಿವಿಲ ಕುಮಾರ್ನ ಮನವೊಲಿಸುವುದಾಗಿ ಭರವಸೆ ನೀಡಿದ್ದ. ಆದರೆ ಇಬ್ಬರೂ ಸೇರಿ ತನ್ನ ಮತ್ತು ಮಕ್ಕಳ ಹತ್ಯೆಗೆ ಸಂಚು ರೂಪಿಸಿದ ಸಂಗತಿ ಆ ಅಮಾಯಕ ಯುವತಿಗೆ ಗೊತ್ತಿರಲಿಲ್ಲ. ಹತ್ಯೆ ಬಳಿಕ ಇಬ್ಬರೂ ತಲೆ ಮರೆಸಿಕೊಂಡಿದ್ದರು.
ಆರೋಪಿಗಳನ್ನ ಹುಡುಕುವ ಪ್ರಯತ್ನ ವಿಫಲವಾಗಿತ್ತು. ಆದರೆ ಇತ್ತೀಚೆಗೆ ದಿವಿಲ್ ಕುಮಾರ್ ಹಾಗೂ ರಾಜೇಶ್ ಪುದುಚೇರಿಯಲ್ಲಿ ವಾಸವಾಗಿದ್ದಾರೆ ಎಂಬ ಸುಳಿವು ದೊರಕಿತ್ತು. ನಕಲಿ ಹೆಸರಿನಲ್ಲಿ ಆಧಾರ್ ಕಾರ್ಡ್(Adharcard) ಸೇರಿದಂತೆ ಹೊಸ ದಾಖಲೆಗಳನ್ನು ಪಡೆದಿದ್ದರು. ನಗರದಲ್ಲಿ ಇಬ್ಬರೂ ಶಿಕ್ಷಕಿಯರನ್ನು ವಿವಾಹವಾಗಿ ಮಕ್ಕಳನ್ನೂ ಪಡೆದು ಸಂಸಾರ ನಡೆಸುತ್ತಿದ್ದರು. ಅವರ ಮೇಲೆ ನಿಗಾ ವಹಿಸಿದ ಸಿಬಿಐ ಚೆನ್ನೈ ಘಟಕದ(CBI Chennai Unit) ಸಿಬ್ಬಂದಿ ಶುಕ್ರವಾರ ಇಬ್ಬರನ್ನೂ ಬಂಧಿಸಿದ್ದಾರೆ.
ಇದನ್ನು ಓದಿ : ಕಾರವಾರದಲ್ಲಿ ಕುದಿಯುವ ಎಣ್ಣೆಯಿಂದ ಬಿಸಿಬಿಸಿ ವಡೆ ತೆಗೆದು ಭಕ್ತಿಯ ಪರಾಕಾಷ್ಠೆ
ಮಂಗಳೂರಿನಲ್ಲಿ ಎನ್ಎಐ ಘಟಕ. ಸಂಸದ ಕ್ಯಾ.ಬ್ರಿಜೇಶ್ ಚೌಟ ಅಮಿತ್ ಶಾ ಭೇಟಿ.