ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news)ಭಟ್ಕಳ(Bhatkal): ಈ ಬಾರಿಯೂ ಸಹ ವಿಶ್ವ ಪ್ರಸಿದ್ಧ ಧಾರ್ಮಿಕ ಸ್ಥಳ  ಮುರ್ಡೇಶ್ವರದಲ್ಲಿ ಮಹಾಶಿವರಾತ್ರಿಯ (Murdeshwar Mahashivaratri) ಉತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಸಿದ್ಧತೆ ನಡೆಸಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ(Mankal Vaidya) ಅವರ ಸಮ್ಮುಖದಲ್ಲಿ ಭಟ್ಕಳದಲ್ಲಿ ನಡೆದ ಸಿದ್ಧತಾ ಉತ್ಸವದ ರೂಪುರೇಷೆಗಳ ಬಗ್ಗೆ ಚರ್ಚಿಸಲಾಯಿತು.

ಫೆಬ್ರುವರಿ ಶಿವರಾತ್ರಿಯ ವರ್ಷವೂ ದೇವಾಲಯವನ್ನು ನಸುಕಿನ ಜಾವ 4 ಗಂಟೆಗೆ ತೆರೆಯಲು ಆಡಳಿತ ಮಂಡಳಿಯವರಿಗೆ ವಿನಂತಿಸಲಾಗಿದೆ. ಇದರಿಂದ ಪಾದಯಾತ್ರೆ ನಡೆಸಿ ಬರುವ ಭಕ್ತರಿಗೆ ಬೆಳಿಗ್ಗೆಯಿಂದಲೇ ದೇವರ ದರ್ಶನ ಸಾಧ್ಯವಾಗಲಿದೆ. ಶಿವರಾತ್ರಿ ಪ್ರಯುಕ್ತ ಶಿರೂರು(Shirooru), ಭಟ್ಕಳ(Bhatkal), ಉತ್ತರಕೊಪ್ಪ(Uttarakoppa) ಮಂಕಿ(Manki), ಹೊನ್ನಾವರದಿಂದ (Honnavar) ಬರುವ ಭಕ್ತರಿಗೆ ವಿಶೇಷ ಬಸ್ ಸೌಲಭ್ಯ ಒದಗಿಸಲು ಕನಿಷ್ಠ 20 ಬಸ್‌ಗಳ ವ್ಯವಸ್ಥೆ ಕಲ್ಪಿಸಲು ಸೂಚಿಸಲಾಗಿದೆ ಎಂದು ಸಚಿವ ಮಂಕಾಳ ವೈದ್ಯ ತಿಳಿಸಿದರು.

ಶಿವರಾತ್ರಿಯ ಜಾಗರಣೆಯ ಅಂಗವಾಗಿ ಸಂಜೆ 6 ಗಂಟೆಯಿಂದ ಬೆಳಗಿನ ಜಾವ 6 ಗಂಟೆಯವರೆಗೆ ರಾಜ್ಯದ ಪ್ರಸಿದ್ಧ ಕಲಾವಿದರಿಂದ ಭಕ್ತಿ ಸಿಂಚನ ಕಾರ್ಯಕ್ರಮ ನಡೆಯಲಿದ್ದು, ಸ್ಥಳೀಯ ಪ್ರತಿಭೆಗಳಿಗೆ ಸಹ ಅವಕಾಶ ನೀಡಲಾಗಿದೆ. ಆಸಕ್ತರು ಶುಕ್ರವಾರದೊಳಗೆ ತಹಸೀಲ್ದಾರ ಅಥವಾ ಸಹಾಯಕ ಆಯುಕ್ತರ ಕಚೇರಿಯಲ್ಲಿ ಹೆಸರು ನೊಂದಾಯಿಸಬಹುದು. ಭಕ್ತಿ ಕಾರ್ಯಕ್ರಮಗಳನ್ನು ಹೊರತುಪಡಿಸಿ ಇತರ ಯಾವುದೇ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ ಎಂದು ಸಚಿವರು ಹೇಳಿದ್ದಾರೆ.

ಸಭೆಯ ಬಗ್ಗೆ ಮಾತನಾಡಿದ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ(DC K Lakshmipriya) , ಶಿವರಾತ್ರಿಯಂದು ಸರಬರಾಜಾಗುವ ಆಹಾರದ ಗುಣಮಟ್ಟವನ್ನು ಮುಂಚಿತವಾಗಿ ಪರೀಕ್ಷಿಸಬೇಕು. ನೀರಿನ ಸ್ವಚ್ಚತೆ, ಸ್ಥಳದ ಪರಿಸರ ಸುಧಾರಣೆ, ವಿದ್ಯುತ್ ಸಂಪರ್ಕ, ಅಗ್ನಿಶಾಮಕ ವ್ಯವಸ್ಥೆ,  ಮೊಬೈಲ್ ಶೌಚಾಲಯಗಳು ಮುಂತಾದ ಸೌಲಭ್ಯಗಳನ್ನು ಪರಿಶೀಲಿಸಿ, ಯಾವುದೇ ತೊಂದರೆಯಾಗದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ  ನಾರಾಯಣ (SP M Narayan) ಮಾತನಾಡಿ, ಕಳೆದ ಬಾರಿಗೆ ಶಿವನ ಮೂರ್ತಿಯನ್ನು ವಿಕೃತಗೊಳಿಸಿ ಶಾಂತಿ ಭಂಗ ಮಾಡಲು ಯತ್ನಿಸಿದ  ಆರೋಪಿಗಳನ್ನು ಬಂಧಿಸಿದ್ದೆವು. ಈ ಬಾರಿ ಅಂತಹ ಯಾವುದೇ ಪ್ರಯತ್ನಗಳು ನಡೆದರೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸಾಮಾಜಿಕ ಜಾಲತಾಣಗಳಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಯಾವುದೇ ಸಂದೇಶಗಳನ್ನು ಹರಡಿದರೆ, ಅಂತಹವರ ವಿರುದ್ಧ ಕಾನೂನು ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಒಟ್ಟಾರೆಯಾಗಿ ಶ್ರೀ ಮುರ್ಡೇಶ್ವರ ಕ್ಷೇತ್ರದಲ್ಲಿ(Murdeshwar Kshetra) ಶಿವನ ಆರಾಧನೆ, ಜಾಗರಣೆಗಾಗಿ ತಯಾರಿ ನಡೆದಿದ್ದು, ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ವಿನಂತಿಸಲಾಗಿದೆ. ಕಾರ್ಯಕ್ರಮದ ಬಗ್ಗೆ ಭಾಗವಹಿಸಿದ ಸಾರ್ವಜನಿಕರು ಸಲಹೆ ಸೂಚನೆ ನೀಡಿದ್ದಾರೆ.

ಭಟ್ಕಳ ಉಪವಿಭಾಗಾಧಿಕಾರಿ ಕಾವ್ಯಾರಾಣಿ, ತಹಸೀಲ್ದಾರ ನಾಗೇಂದ್ರ ಕೊಳಶೆಟ್ಟಿ, ಡಿವೈಎಸ್‌ಪಿ ಮಹೇಶ್ ಎಮ್. ಸೇರಿದಂತೆ  ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಇದನ್ನು ಓದಿ : ಜಿಲ್ಲಾಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯರು ಮತ್ತು ಸಿಬ್ಬಂದಿಗಳ ಮೇಲೆ ಹಲ್ಲೆ. ಕೆಲ ಕಾಲ ಕೆಲಸಕ್ಕೆ ಬಹಿಷ್ಕಾರ ಹಾಕಿದ ಗುತ್ತಿಗೆ ನೌಕರರು.

ಸಂಸ್ಥೆಯ ಹಣ ದುರ್ಬಳಕೆ. ಸಿಬ್ಬಂದಿ ಮೇಲೆ ಕ್ರಿಮಿನಲ್ ದೂರು ದಾಖಲಿಸಿದ ಡಾ. ವೆಂಕಟೇಶ ನಾಯ್ಕ.

ಅತ್ತೆ ಸಾಯಿಸಲು ಮಾತ್ರೆ ಹೇಳಿ. ವೈದ್ಯರ ಬಳಿ ಸಲಹೆ ಕೇಳಿದ ಸೊಸೆ.

ಮುಡಾ ಪ್ರಕರಣದಲ್ಲಿ ಸಾಕ್ಷಾಧಾರಗಳ ಕೊರತೆ.  ಸಿಎಂ ಮತ್ತು ಪತ್ನಿ ಬಚಾವ್.