ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಕೊಲ್ಲೂರು(Kolluru) : ದೇಶದ ಪ್ರಸಿದ್ಧ ಸಂಗೀತ ನಿರ್ದೇಶಕ(Music Director), ಸ್ವರ ಮಾಂತ್ರಿಕ ಇಳಯರಾಜ(Elayaraj) ಅವರು ಹರಕೆ ರೂಪದಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ(Kolluru Mukambika Devi) ಸುಮಾರು 4 ಕೋಟಿ ರೂ. ಮೌಲ್ಯದ ವಜ್ರ ಖಚಿತ ಕಿರೀಟವನ್ನು ಸಮರ್ಪಿಸಿದರು.
ಬುಧವಾರ ಶ್ರೀದೇವಿ ಸನ್ನಿಧಿಗೆ ವಜ್ರ ಖಚಿತ ಕಿರೀಟವನ್ನು ಓಲಗ ಮಂಟಪದಿಂದ ಪುರಮೆರವಣಿಗೆಯಲ್ಲಿ ಬರಮಾಡಿಕೊಳ್ಳಲಾಯಿತು.
ಕೊಲ್ಲೂರು ಮೂಕಾಂಬಿಕೆಯ(Kolluru Mukambike) ಪರಮ ಭಕ್ತನಾಗಿರುವ ಇಳಯರಾಜ(Elayaraj) ಅವರು ಈ ಹಿಂದೆಯೂ ಮೂಕಾಂಬಿಕೆಗೆ ಬಗೆ ಬಗೆಯ ಆಭರಣ(Ornaents) ತೊಡಿಸಿ ತಮ್ಮ ಇಚ್ಚೆಯಂತೆ ನಡೆದುಕೊಂಡಿದ್ದರು. ಈ ಬಾರಿ ವಜ್ರದ ಕಿರೀಟ ಸಹಿತ ಆಭರಣಗಳ ಜೊತೆಗೆ ವೀರಭದ್ರ ದೇವರಿಗೆ ರಜತ ಕಿರೀಟ ಮತ್ತು ಖಡ್ಗ ಸಮರ್ಪಣೆ ಮಾಡಿದರು. ಆಭರಣ ಅರ್ಪಿಸುವ ಮುನ್ನ ಆಕರ್ಷಕ ಮೆರವಣಿಗೆ ನಡೆಯಿತು.
ದೇಗುಲದ ಆಡಳಿತ ಮಂಡಳಿ ಹಾಗೂ ಅರ್ಚಕರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಆಭರಣ ಅರ್ಪಿಸಿದ ಇಳೆಯರಾಜ ಭಾವುಕರಾದರು.
ಮೂಕಾಂಬಿಕೆಯಿಂದಾಗಿ ತನ್ನ ಜೀವನದಲ್ಲಿ ಪವಾಡ ನಡೆದಿದೆ ಎಂದು ಇಳಯರಾಜ ನಂಬಿದ್ದು, ಪ್ರತೀ ವರ್ಷ ತಮ್ಮ ಹುಟ್ಟುಹಬ್ಬವನ್ನು ಇಲ್ಲೇ ಆಚರಣೆ ಮಾಡುತ್ತಾರೆ. ಮಾತ್ರವಲ್ಲ ಸಂಗೀತ ಸೇವೆಯನ್ನೂ ನೀಡುತ್ತಾ ಬಂದಿದ್ದಾರೆ. ಇಂದಿನ ಕಾರ್ಯಕ್ರಮದಲ್ಲಿ ಭಕ್ತರು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ದೇಗುಲದ ವ್ಯವಸ್ಥಾಪನಾ ಸಮಿತಿ ವತಿಯಿಂದ ಮಹಾದಾನಿಗೆ ಗೌರವ ಸಲ್ಲಿಸಲಾಯಿತು.
ಇದನ್ನು ಓದಿ : ಸಪ್ಟೆಂಬರ್ 12ರವರೆಗೆ ಶಾಸಕ ಸತೀಶ್ ಸೈಲ್ ಇಡಿ ಕಸ್ಟಡಿಗೆ. ಬಂಧನಕ್ಕೆ ಡಿಕೆಶಿ ಪ್ರತಿಕ್ರಿಯೆ.
	
						
							
			
			
			
			
