ಶಿರಸಿ : ವಾಣಿಜ್ಯ ನಗರಿ ಶಿರಸಿಯಲ್ಲಿ ಮಂಗಳವಾರ ಎನ್ಎಐ ಅಧಿಕಾರಿಗಳು  ಕಾರ್ಯಾಚರಣೆ ನಡೆಸಿದ್ದಾರೆ. ದಾಸನಕೊಪ್ಪ ಮೂಲದ ವ್ಯಕ್ತಿಯೊರ್ವನಿಗೆ ಹೆಡೆ ಮುರಿ ಕಟ್ಟಿದ್ದಾರೆ.

ದಾಸನಕೊಪ್ಪ ಅಬ್ದುಲ್ ಶಕೂರ ಎಂಬಾತನನ್ನ ವಶಕ್ಕೆ ಪಡೆದು ಬನವಾಸಿ ಪೊಲೀಸ್ ಠಾಣೆಯಲ್ಲಿ  (NIA)ರಾಷ್ಟ್ರೀಯ ತನಿಖಾ ದಳದಿಂದ ವಿಚಾರಣೆ ನಡೆಸಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಕೋಮು ಗಲಭೆಗೆ ಉತ್ತೇಜನ ನೀಡಿದರ ಜೊತೆಗೆ ಭಯೋತ್ಪಾದಕ ಚಟುವಟಿಕೆಗೆ ಪ್ರಚೋದನೆ ನೀಡಿದ ಆರೋಪವಿತ್ತು. ಮತ್ತು ನಕಲಿ ಪಾಸ್ಪೋರ್ಟ್ ಹೊಂದಿರುವ ಕಾರಣಕ್ಕೆ ಬಂಧಿಸಲಾಗಿದೆ. ಪ್ರಾಥಮಿಕ ತನಿಖೆ ನಡೆಸಿದ ನಂತರ ಹೆಚ್ಚಿನ ವಿಚಾರಣೆಗೆ ಬಂಧಿಸಿ ಬೆಂಗಳೂರಿಗೆ ಕರೆದೊಯ್ದಿದ್ದಾರೆಂದು ಹೇಳಲಾಗಿದೆ.