ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news)ನವದೆಹಲಿ(Newdelhi): ಶತ್ರು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ (POK) ಒಂಬತ್ತು ಅಡಗುತಾಣಗಳ ಮೇಲೆ ಭಾರತೀಯ ವಾಯು ಸೇನೆ(Indian Airforce) (ಐಎಎಫ್) ದಾಳಿ(Attack) ನಡೆಸಿದೆ.

ಭಾರತೀಯ ಸೇನೆ ನಡೆಸಿದ ‘ಆಪರೇಷನ್ ಸಿಂಧೂರ'(Operation Sindhoor) ದಾಳಿಯಲ್ಲಿ ನಿಷೇಧಿತ ಉಗ್ರ ಸಂಘಟನೆಗಳಾದ ಜೈಶ್ -ಎ-ಮೊಹಮ್ಮದ್ (ಜೆಇಎಂ), ಲಷ್ಕರ್-ಎ-ತಯಬಾ (ಎಲ್‌ಇಟಿ) ಮತ್ತು ಇಬ್ಬುಲ್‌ ಮುಜಾಹಿದ್ದೀನ್ ಉಗ್ರರ (Terrorist) ಪ್ರಧಾನ ಕಚೇರಿಗನ್ನ ದ್ವಂಸಗೊಳಿಸಲಾಗಿದೆ.

ಕಾರ್ಯಾಚರಣೆಯಲ್ಲಿ ನೂರಕ್ಕೂ ಹೆಚ್ಚು ಭಯೋತ್ಪಾದಕರು ಮಟಾಷ್ ಆಗಿದ್ದಾರೆ. ನಿಷೇಧಿತ ಜೈಶ್ -ಎ-ಮೊಹಮ್ಮದ್ ಭಯೋತ್ಪಾದಕ ಗುಂಪುಗಳ(Terror Gang) ನೆಲೆಯಿರುವ ಬಹವಾಲ್‌ಪುರದಲ್ಲಿ ಮರ್ಕಜ್ ಸುಭಾನ್ ಅಲ್ಲಾ ಮಸೀದಿ, ತೆಹ್ರಾ ಕಲಾನ್‌ನಲ್ಲಿನ ಸರ್ಜಾಲ್, ಕೋಟಿಯ ಮರ್ಕಜ್ ಅಬ್ಬಾಸ್ ಮತ್ತು ಮುಜಫರಾಬಾದ್‌ನ ಸೈಯತ್ನಾ ಬಿಲಾಲ್ ಕ್ಯಾಂಪ್‌ಗಳ ಮೇಲೆ ಭಾರತ ಪರಿಣಾಮಕಾರಿಯಾಗಿ ದಾಳಿ ಮಾಡಿದೆ.

ಭಯೋತ್ಪಾದಕ ಸಂಘಟನೆಯ ಶಿಬಿರಗಳು(Camp) ಮತ್ತು ತರಬೇತಿ ಕೇಂದ್ರಗಳನ್ನು(Training Center) ಧ್ವಂಸಗೊಳಿಸಲಾಗಿದೆ. ಭಾರತದ ಸೇನೆ ಪಡೆದುಕೊಂಡ ಗೌಪ್ಯ ಮಾಹಿತಿಯ ಪ್ರಕಾರ ದಾಳಿಗೆ ಆಯ್ದುಕೊಂಡ 9 ಸ್ಥಳಗಳಲ್ಲಿ  ಪಾಕಿಸ್ತಾನದಲ್ಲಿ ನಾಲ್ಕು ಮತ್ತು ಇನ್ನುಳಿದ ಐದು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿದ್ದವು.

ಮಧ್ಯರಾತ್ರಿ 1.44ರ ಸುಮಾರಿಗೆ ಭಾರತ ಕ್ಷಿಪಣಿ ದಾಳಿ ನಡೆಸಿದ್ದು,  ಯಾವುದೇ ಪಾಕಿಸ್ತಾನಿ ಮಿಲಿಟರಿ ಸೌಲಭ್ಯಗಳನ್ನು ಗುರಿಯಾಗಿಸಿಕೊಳ್ಳದೆ  ಉಗ್ರರ ನೆಲೆಗಳ ಮೇಲೆ ಮಾತ್ರ ದಾಳಿ ನಡೆಸಲಾಗಿದೆ ಎಂದು ಭಾರತೀಯ ಸೇನೆ ಮಾಹಿತಿ ನೀಡಿದೆ.

ಅಮೇರಿಕಾ ಅಧ್ಯಕ್ಷರ ಪ್ರತಿಕ್ರಿಯೆ: ‘ಆಪರೇಷನ್ ಸಿಂಧೂರ” ಎಂದು ಹೆಸರಲ್ಲಿ ನಡೆದ ಕಾರ್ಯಾಚರಣೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್(Donald Trump) ಪ್ರತಿಕ್ರಿಯೆ ನೀಡಿದ್ದಾರೆ. ಕಾರ್ಯಾಚರಣೆ ಬೇಗ ಕೊನೆಗೂಲಿಸುತ್ತೀರಿ ಎಂಬ ಆಶಾಭಾವನೆ ಇದೆ ಎಂದು ಹೇಳಿದ್ದಾರೆ.  ಭಾರತ ನಡೆಸಿದ ಈ ಪರಾಕ್ರಮ ದಾಳಿಗೆ  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರು, ‘ಇದು ನಾಚಿಕೆಗೇಡು. ಈಗಷ್ಟೇ ಇದರ ಬಗ್ಗೆ ತಿಳಿಯಿತು. ಹಿಂದಿನ ಬೆಳವಣಿಗೆಗಳನ್ನು ನೋಡಿದರೆ ಏನೋ ನಡೆಯುತ್ತದೆ ಎಂದು ಜನರು ಅಂದುಕೊಂಡಿದ್ದರು. ಅವರು ಹಲವು ದಶಕಗಳು ಮತ್ತು ಶತಮಾನಗಳಿಂದ ಸಂಘರ್ಷ ನಡೆಸುತ್ತಿದ್ದಾರೆ. ಅದು ಬೇಗ ಕೊನೆಗೊಳ್ಳಲಿದೆ ಎಂಬ ವಿಶ್ವಾಸ ನನಗಿದೆ” ಎಂದು ಅವರು ಹೇಳಿದ್ದಾರೆ.

ಇದನ್ನು ಓದಿ : ಕಾರವಾರ ಮತ್ತು ರಾಯಚೂರಿನಲ್ಲಿ ಮಾಕ್ ಡ್ರಿಲ್ ಇಲ್ಲ. ಸಿದ್ಧತೆ ಮಾಡಿಕೊಂಡು ಮುಂದಿನ ವಾರ : ಜಿಲ್ಲಾಧಿಕಾರಿ.

ಹೀನ ಕೃತ್ಯದ ಹಿಂದಿರುವವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಪ್ರಧಾನಿ ಮೋದಿ ಗುಡುಗು