ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news)ಇಸ್ಲಾಮಾಬಾದ್(Islamabad) : ಕಾಶ್ಮೀರದ ಪೆಹಲ್ಲಾಮ್ ನಲ್ಲಿ ಉಗ್ರರ ದಾಳಿ(Terror Attack) ಬಳಿಕ ಭಾರತ ಸೆಟೆದು ನಿಂತಿದೆ. ಯಾವಾಗ ಪಾಕಿಸ್ತಾನ(Pakistan) ಮತ್ತು ಭಾರತದ(India) ನಡುವೆ   ಯುದ್ಧ(War) ಸಂಭವಿಸಬಹುದೆಂಬ ನಿರೀಕ್ಷೆಯಲ್ಲಿ ಎಲ್ಲರೂ ಇದ್ದಾರೆ. ಈ ನಡುವೆ ಪಾಕಿಸ್ತಾನಕ್ಕೆ ಅವರದ್ದೇ ಸೈನಿಕರು ಶಾಕ್ ನೀಡಿದ್ದಾರೆ.

ಭಾರತದ ವಿರುದ್ಧ ಯುದ್ಧಕ್ಕೆ ಸಿದ್ದವಿದೆ ಎಂದು ವರ್ತಿಸುತ್ತಿರುವ ಪಾಕಿಸ್ತಾನದ ಬಂಡವಾಳ ಅರಿತ ಅಲ್ಲಿನ ಸೈನಿಕರು,  ಸೇನಾ ಅಧಿಕಾರಿಗಳು ರಾಜೀನಾಮೆ(Soldiers Resign) ನೀಡುತ್ತಿದ್ದಾರೆ ಎಂದು ವರದಿಯಾಗಿದೆ.

ಕೇವಲ ಎರಡು ದಿನಗಳಲ್ಲಿ ಸುಮಾರು ಐದು ಸಾವಿರ ಅಧಿಕಾರಿಗಳು ಮತ್ತು ಸೈನಿಕರು ರಾಜೀನಾಮೆ ನೀಡಿದ್ದಾರೆ. . ಭಾರತವು ಯಾವುದೇ ಕ್ಷಣದಲ್ಲಿ ಪ್ರಬಲ ಮಿಲಿಟರಿ ಕಾರ್ಯಾಚರಣೆಯನ್ನು ಪ್ರಾರಂಭಿಸಬಹುದು ಎಂಬ ಭಯದಿಂದ ಪಾಕಿಸ್ತಾನಿ ಸೈನಿಕರ ಕುಟುಂಬಗಳು(Pakistani Soldiers Resign) ಉದ್ಯೋಗಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯಿಸುತ್ತಿವೆಯಂತೆ

ತಮ್ಮ ಸುರಕ್ಷತೆಯ ಬಗ್ಗೆ ಭಯಗೊಂಡು ಕೆಲವು ಸೈನಿಕರು ಕರ್ತವ್ಯದಿಂದ ಹಿಂದೆ ಸರಿಯುತ್ತಿದ್ದಾರೆ. ಈಗಾಗಲೇ ಕೆಲವರು ರಾಜೀನಾಮೆ ನೀಡಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಸಂಖ್ಯೆಯಲ್ಲಿ ಸೈನಿಕರು ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ.

ರಾಜೀನಾಮೆ ನೀಡುವವರ ಸಂಖ್ಯೆ ಜಾಸ್ತಿಯಾಗುತ್ತಿದ್ದಂತೆ ಪಾಕ್ ಸೇನೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದೆ. ಸೇನೆಯ ನಿಯಮವನ್ನು ಉಲ್ಲಂಘಿಸಿದರೆ ಅವರ ವಿರುದ್ಧ ಪಾಕಿಸ್ತಾನ ಸೇನಾ ಕಾಯ್ದೆ(1952) ಅಡಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ಈ  ಆದೇಶವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಒಂದು ಹಂತದಲ್ಲಿ ಭಾರತ ಈ ಸಂದರ್ಭದಲ್ಲಿ ಮಾಸ್ಟರ್ ಸ್ಟ್ರೋಕ್ ನೀಡಿದಂತಿದೆ.

ಇದನ್ನು ಓದಿ : ಕಾಶ್ಮೀರ ಘಟನೆ ಹಿನ್ನಲೆಯಲ್ಲಿ ಸಂಗೀತ ಕಾರ್ಯಕ್ರಮ ರದ್ದುಗೊಳಿಸಿದ ಗಾಯಕರು. ಕರಾವಳಿ ಉತ್ಸವದ ಕಥೆ ಏನು?

ಕೆಜಿ ಹಳ್ಳಿ-ಡಿಜೆ ಹಳ್ಳಿ ಪ್ರಕರಣದ  ಆರೋಪಿ ಬಂಧನ

ಪ್ರಧಾನಿ ಬಗ್ಗೆ ಸಾಮಾಜಿಕ ಜಾಲ ತಾಣದಲ್ಲಿ ಅವಮಾನಕಾರಿ ಪೋಸ್ಟ್ ಶೇರ್ ಮಾಡಿದಾತ ಕಂಬಿ ಹಿಂದೆ.