ಕಾರವಾರ : ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಬಿಜೆಪಿಗೆ ರಾಜೀನಾಮೆ ಕೊಟ್ಟು ಮತ್ತೆ ಚುನಾವಣೆ ಎದುರಿಸಲಿ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಸವಾಲ್ ಹಾಕಿದ್ದಾರೆ.
ಕಾರವಾರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕಾಗೇರಿ, ಹೆಬ್ಬಾರ್ ಅವರು ರಾಜ್ಯಸಭಾ ಚುನಾವಣೆಯಲ್ಲಿ ಮತ ಹಾಕಿಲ್ಲ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಚಟುವಟಿಕೆಯಲ್ಲಿ ತೊಡಗಿಲ್ಲ ಪ್ರಚಾರ ಮಾಡಿಲ್ಲ ಎಂದ ಅವರು, ಬಿಜೆಪಿಯ ತತ್ವ ಸಿದ್ಧಾಂತಗಳು ಹೆಬ್ಬಾರ್ಗೆ ಒಪ್ಪಿಯಾಗಿಲ್ಲ ಎನ್ನುವುದು ಸ್ಪಷ್ಟವಾಗಿದೆ ಹಿಗ್ಗಾಗಿ ಅವರು ಪಕ್ಷಕ್ಕೆ ರಾಜೀನಾಮೆ ನೀಡಿ ಚುನಾವಣೆ ಎದುರಿಸಲಿ. ನಾವು ಸಿದ್ದರಾಗಿದ್ದೆವೆಂದರು.
ಇದೆ ವೇಳೆ ರಾಜ್ಯ ಕಾಂಗ್ರೆಸ್ ಸರ್ಕಾರದ ಒಂದು ವರ್ಷದ ಆಡಳಿತ ಭ್ರಮ ನಿರಸನಗೊಳಿಸಿದೆ ಎಂದಿರುವ ವಿಶ್ವೇಶ್ವರ ಕಾಗೇರಿ, ಈ ಚುನಾವಣೆಯ ಮೂಲಕ ಸರ್ಕಾರ ಸಂಪೂರ್ಣ ವಿಫಲವಾಗಿದ್ದು ಕಂಡು ಬಂದಿದೆ. ಆಡಳಿತದಲ್ಲಿ ಭ್ರಷ್ಟಾಚಾರ, ಆಡಳಿತದಲ್ಲಿ ಬೇಧಭಾವ, ಅಲ್ಪಸಂಖ್ಯಾತರ ಓಲೈಕೆಯ ತುಷ್ಟಿಕರಣ ಇದೆ ಎಂಬುದು ಚುನಾವಣೆಯಿಂದ ಗೊತ್ತಾಗಿದೆ. ಸಂವಿಧಾನದ ಆಶಯ ಗಾಳಿಗೆ ತೋರಿರೋದು ಗೊತ್ತಾಗಿದೆ ಎಂದರು.
ಮತದಾರರ ಅಭೂತಪೂರ್ವ ತೀರ್ಪುನ್ನ ನಾವು ಗೌರವಿಸುತ್ತೇವೆ. ಕಾಂಗ್ರೆಸ್ ಎಲ್ಲಾ ವಿಭಾಗಗಳಲ್ಲಿ ವಿಫಲವಾಗಿದ್ರಿಂದ ಅಭಿವೃದ್ಧಿ ನಿಂತ ನೀರಾಗಿದೆ. ರಾಜ್ಯದ ಸರ್ಕಾರ ಅಭಿವೃದ್ಧಿ ಕಡೆ ಲಕ್ಷ್ಯ ಕೊಡಬೇಕು ಎಂದು ಸಲಹೆ ನೀಡಿದರು.
ಉತ್ತರಕನ್ನಡ ಕ್ಷೇತ್ರದಲ್ಲಿ ತಮಗೆ ಅಭೂತಪೂರ್ವ ಗೆಲುವು ತಂದುಕೊಟ್ಟ ಮತದಾರರಿಗೆ, ಪಕ್ಷದ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದರು.