ಬಾಗಲಕೋಟೆ : ಕೊಟ್ಟ ಮಾತಿನಂತೆ ಪ್ರಧಾನಿ ನರೇಂದ್ರ ಮೋದಿ ಅವರು ಇಲ್ಲಿನ ಯುವತಿಯೋರ್ವಳಿಗೆ ಪತ್ರ ಬರೆದಿದ್ದಾರೆ.

ಬಾಗಲಕೋಟೆಯ ಯುವತಿ ನಾಗರತ್ನ ಮೇಟಿ ಈಗ ಫುಲ್ ಖುಷ್ ಆಗಿದ್ದಾರೆ. ಏಪ್ರಿಲ್ 29 ರಂದು ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ಮೋದಿ ಬಾಗಲಕೋಟೆಗೆ ಆಗಮಿಸಿದಾಗ  ನಾಗರತ್ನ ತಾನು ಚಿತ್ರಿಸಿದ ಸ್ಕೆಚ್ ಹಿಡಿದು ವೇದಿಕೆ ಮುಂಭಾಗದಲ್ಲಿ ನಿಂತಿದ್ದಳು. ತಮ್ಮ ತಾಯಿಯ ಫೋಟೋ ಫ್ರೆಮ್ ನೋಡಿದ ಮೋದಿ ಅವರು ಎಸ್ ಪಿಜಿ ಸಿಬ್ಬಂದಿಗೆ ಹೇಳಿ ಫೋಟೋ ತರಿಸಿಕೊಂಡಿದ್ದರು. ಅಲ್ಲದೆ
ಫೋಟೋದೊಂದಿಗೆ ನಿನ್ನ ಹೆಸರು ವಿಳಾಸ ಬರಿ ನಾನು ಪತ್ರ ಕಳಿಸುತ್ತೇನೆ ಎಂದಿದ್ದರು.

ಕೊಟ್ಟ ಮಾತಿನಂತೆ ಮೇ 5 ರಂದು ನರೇಂದ್ರ ಮೋದಿ ಅವರು ಪತ್ರ ಬರೆದಿದ್ದಾರೆ. ಪೋಸ್ಟ್ ಮೂಲಕ ಯುವತಿಗೆ  ಪತ್ರ ತಲುಪಿದೆ.

ಪತ್ರದಲ್ಲಿ ಮೋದಿ ಸಂದೇಶ :  ಸುಂದರವಾದ ಭಾವಚಿತ್ರ ಉಡುಗೊರೆಯಾಗಿ ನೀಡಿದಕ್ಕೆ ನಾನು ನಿಮಗೆ ಧನ್ಯವಾದ ತಿಳಿಸುತ್ತೇನೆ.. ಈ ಕಲಾತ್ಮಕ ಕೆಲಸವು ಮಾನವ  ಭಾವನೆಗಳ ಪ್ರಾಮುಖ್ಯತೆಯನ್ನು ತೋರಿಸುತ್ತದೆ.. ನಿಮ್ಮ ವರ್ಣಚಿತ್ರ ರೋಮಾಂಚಕ ಪ್ರದರ್ಶನವು ಯುವಶಕ್ತಿಯ ಸಾರವನ್ನು ಒಳಗೊಂಡಿರುತ್ತದೆ. ಹೊಸ ಭಾರತವನ್ನು ರೂಪಿಸುವ ಮತ್ತು ನಮ್ಮ ಯುವಕರಿಗೆ ಭರವಸೆಯ ಭವಿಷ್ಯವನ್ನು ಭದ್ರಪಡಿಸುವ ನನ್ನ ಬದ್ಧತೆಯನ್ನು ಪ್ರೇರೇಪಿಸುತ್ತದೆ.
ನಿಮ್ಮ ಸೃಜನಶೀಲ ಪ್ರತಿಭೆ ಮತ್ತು ಕೌಶಲ್ಯಗಳನ್ನು ನಿಮ್ಮ ಕೆಲಸಕ್ಕೆ ಅನ್ವಯಿಸುವಲ್ಲಿ ನೀವು ನಿರಂತರವಾಗಿರಿ..
ಉಜ್ವಲ ಭವಿಷ್ಯಕ್ಕಾಗಿ ಶುಭ ಹಾರೈಕೆಗಳೊಂದಿಗೆ.
ಇಂತಿ, ನಿಮ್ಮ ನರೇಂದ್ರ ಮೋದಿ.. ಎಂದು ಉಲ್ಲೇಖವಿದೆ.