ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news)ಬೆಂಗಳೂರು (Bangaluru) : ಕಳೆದ ಕೆಲ ದಿನಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ.  ಬಿಸಲಿಗೆ ಕಾದ ಭೂಮಿ ತಂಪಾಗಿವೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ(Rain) ಮುಂದುವರಿಯಲಿದೆ. ಮಾರ್ಚ್ 31ರವರೆಗೆ ರಾಜ್ಯದ ಇನ್ನಷ್ಟು ಕಡೆಗಳಲ್ಲಿ ಮಳೆ ಬೀಳುವ  ಮುನ್ಸೂಚನೆ ನೀಡಲಾಗಿದೆ.

ಉಡುಪಿ(Udupi), ದಕ್ಷಿಣ ಕನ್ನಡ(Dakshinakannada), ಮೈಸೂರು(Mysore), ಕೊಡಗು(Kodagu), ಚಾಮರಾಜನಗರ (Chamarajanagar), ಹಾಸನ(Hasan), ಶಿವಮೊಗ್ಗ ಜಿಲ್ಲೆಗಳಲ್ಲಿ  ಕಳೆದ ಎಂಟತ್ತು ದಿನಗಳಿಂದ ಮುಂಗಾರು ಮಳೆ ಬೀಳುತ್ತಿದೆ. ಎರಡು ದಿನಗಳಿಂದ ಉತ್ತರ ಕರ್ನಾಟಕದ ಹಾವೇರಿ(Haveri), ಧಾರವಾಡ(Dharwad), ಕಲಬುರಗಿ(Kalaburgi), ಬಾಗಲಕೋಟೆ(Bagalakote) ಭಾಗಕ್ಕೂ ಮಳೆ ವಿಸ್ತರಿಸಿದೆ. ಈ ಮಳೆ ಮುಂದಿನ ಎರಡು ಮತ್ತಷ್ಟು ಚುರುಕಾಗಲಿದೆ. ನಂತರ ಒಣ ಹವೆಯೇ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ(Uttarakannada) ಜಿಲ್ಲೆಯಲ್ಲಿ  ಆಲಿಕಲ್ಲು ಸಹಿತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು ಸಾರ್ವಜನಿಕರಿಗೆ ಗುಡುಗು ಮತ್ತು ಸಿಡಿಲಿನಿಂದ ಜಿಲ್ಲೆಯಲ್ಲಿ ಸಾರ್ವಜನಿಕರು ಮತ್ತು ಜಾನುವಾರು ಪ್ರಾಣಹಾನಿಗಳನ್ನು ತಪ್ಪಿಸಲು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಈ ಕೆಳಕಂಡ ಸಲಹೆಗಳನ್ನು ನೀಡಿದೆ. ಪ್ರಕೃತಿ ವಿಕೋಪಗಳಿಂದಾಗಿ ಜಿಲ್ಲೆಯಲ್ಲಿ ಸಾರ್ವಜನಿಕ ಮತ್ತು ಜಾನುವಾರು ಪ್ರಾಣಹಾನಿಗಳನ್ನು ತಪ್ಪಿಸಲು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಈ ಕೆಳಕಂಡ ಸಲಹೆಗಳನ್ನು ನೀಡಲಾಗಿದೆ.

ಮುಂದಿನ 48 ಗಂಟೆ (ಮಾರ್ಚ್ 27ರವರೆಗೆ) ದಕ್ಷಿಣ ಒಳನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆ ಸುರಿಯುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲೂ ಪೂರ್ವ ಮುಂಗಾರು ಚುರುಕಾಗುವ ಸಾಧ್ಯತೆ ಇದೆ.

ಇಂದಿನಿಂದಲೇ ಗುಡುಗು ಮಿಂಚು ಸಹಿತ ಹಗುರದಿಂದ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಉತ್ತರ ಕರ್ನಾಟಕದ ಕೆಲವು ಸ್ಥಳಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಈ ಮೇಲಿನ ಜಿಲ್ಲೆಗಳ ಹೊರತಾಗಿ ಬೇರೆ ಕಡೆಗಳಲ್ಲಿ ಶುಷ್ಕ ವಾತಾವರಣ ಕಂಡು ಬರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನು ಓದಿ : ಸಿಐಎಸ್‌ಎಫ್ ಯೋಧರಿಂದ ಮೈ ನವೀರೇಳಿಸುವ ಸಾಹಸ ಪ್ರದರ್ಶನ

ಖಾಸಗಿ ವ್ಯಕ್ತಿಗಳಿಂದ ಟ್ಯಾಂಕರ್ ನೀರು ಸರಬರಾಜು ಮಾಡುವ ಪರಿಸ್ಥಿತಿಗೆ ಕಾರಣವಾದರೇ ಸಂಬಂಧಪಟ್ಟ ಅಧಿಕಾರಿಗಳ ವಿರುದ್ದ ಕಠಿಣ ಕ್ರಮ : ಸಚಿವ ಮಂಕಾಳ ವೈದ್ಯ.

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಗ್ಯಾಸ್ ಸಿಲಿಂಡರ್ ವಾಹನ