ಗೋಕರ್ಣ : ಖ್ಯಾತ ಚಿತ್ರ ನಟ ರಿಷಬ್ ಶೆಟ್ಟಿ ಪುರಾಣ ಪ್ರಸಿದ್ಧ ಗೋಕರ್ಣಕ್ಕೆ ಭೇಟಿ ನೀಡಿದ್ದಾರೆ. ಗೋಕರ್ಣದ ವಿವಿಧ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿದ್ದಾರೆ.

ಕಾಂತಾರ ಚಲನ ಚಿತ್ರದ ಮೂಲಕ ಪ್ರಸಿದ್ಧಿಯಾಗಿರುವ  ರಿಷಬ್ ಶೆಟ್ಟಿ ಅವರು ತಮ್ಮ ಕುಟುಂಬ ಸಮೇತರಾಗಿ ಗೋಕರ್ಣಕ್ಕೆ ಆಗಮಿಸಿದ್ದರು. ಮೊದಲು ಇಲ್ಲಿನ  ಮಹಾಗಣಪತಿ ದೇವರಿಗೆ ಪೂಜೆ ಸಲ್ಲಿಸಿ ಬಳಿಕ  ಮಹಾಬಲೇಶ್ವರ ದೇವಾಲಯದಲ್ಲಿ ಆತ್ಮಲಿಂಗಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ಇದೆ ವೇಳೆ  ಶ್ರೀ ತಾಮ್ರ ಗೌರಿ ದೇವಾಲಯಕ್ಕೂ ತೆರಳಿ ದೇವರ ದರ್ಶನ ಪಡೆದರು.