ದಾಂಡೇಲಿ : ತಾಲೂಕಿನ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಪತ್ರಕರ್ತ ಸಂದೇಶ್.ಎಸ್.ಜೈನ್  ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಹಿರಿಯ ಪತ್ರಕರ್ತ ಗುರುಶಾಂತ ಜಡೆಹಿರೇಮಠ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

ಸಂಘದ ಉಪಾಧ್ಯಕ್ಷರಾಗಿ ಹಿರಿಯ ಪತ್ರಕರ್ತ ಕೃಷ್ಣ ಪಾಟೀಲ್, ಖಜಾಂಚಿಯಾಗಿ ಅಕ್ಷಯ ಗೋಸಾವಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರತಿನಿಧಿಯಾಗಿ ಹಿರಿಯ ಪತ್ರಕರ್ತರಾದ ಯು.ಎಸ್ ಪಾಟೀಲ್ ಅವರನ್ನೆ ಮುಂದುವರಿಸಲಾಗಿದೆ. ಇನ್ನೂ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರುಗಳಾಗಿ ಹಿರಿಯ ಪತ್ರಕರ್ತರಾದ ಬಿ.ಎನ್.ವಾಸರೆ, ಪತ್ರಕರ್ತರಾದ ರಾಜೇಶ್ ತಳೇಕರ, ಪ್ರವೀಣ್ ಕುಮಾರ್ ಸುಲಾಖೆ ಮತ್ತು ಅಪ್ತಾಬ್ ಶೇಖ ಅವರನ್ನು ಆಯ್ಕೆ ಮಾಡಲಾಗಿದೆ.

ನಗರದ ಸಂತೋಷ್ ಹೋಟೆಲ್ ಸಭಾಭವನದಲ್ಲಿ ಶುಕ್ರವಾರ ನಡೆದ ಸಂಘದ ಹಾಲಿ ಅಧ್ಯಕ್ಷರಾದ ಕೃಷ್ಣ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಘದ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.