ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಕಾರವಾರ(Karwar) : ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯಂತೆ ಅಗಸ್ಟ್ 28 ರವರೆಗೆ ಉತ್ತರಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ “ರೆಡ್ ಅಲರ್ಟ್” (Red Alert) ಘೋಷಿಸಲಾಗಿದೆ.
ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಕೆ. ಉತ್ತರಕನ್ನಡ (Uttarakannada) ಜಿಲ್ಲೆಯ ಹಲವು ತಾಲೂಕುಗಳಿಗೆ ರಜೆ ಘೋಷಿಸಿದ್ದಾರೆ. ಕಾರವಾರ(Karwar), ಅಂಕೋಲಾ(Ankola), ಕುಮಟಾ(Kumta), ಹೊನ್ನಾವರ(Honnavar), ಭಟ್ಕಳ(Bhatkal), ಶಿರಸಿ(Sirsi), ಸಿದ್ದಾಪುರ(Siddapura), ಯಲ್ಲಾಪುರ(Yallapur), ಜೋಯಿಡಾ(Joida) ಮತ್ತು ದಾಂಡೇಲಿ(Dandeli) ತಾಲ್ಲೂಕುಗಳ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು, ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಮಾತ್ರ ಅಗಸ್ಟ್ 28ರ ಗುರುವಾರ ರಜೆ ಘೋಷಿಸಲಾಗಿದೆ.
ಈ ಆದೇಶವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಕ್ಷಣ ಕಾರ್ಯರೂಪಕ್ಕೆ ತರುವಂತೆ ತಿಳಿಸಲಾಗಿದೆ. ಈ ರಜಾ ದಿನವನ್ನು ಮುಂದಿನ ದಿನಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಇದನ್ನು ಓದಿ : ಇಡಗುಂಜಿಯಲ್ಲಿ ಭಕ್ತರ ಮಹಾಪುರ.