ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news)ಕಾರವಾರ (Karwar) : ಉತ್ತರಕನ್ನಡ ಜಿಲ್ಲೆಯಲ್ಲಿ ನಾಳೆ ಜುಲೈ 4ರಂದು ರೆಡ್ ಅಲರ್ಟ್(Red Alert) ಇದ್ದಿದರಿಂದ ಜಿಲ್ಲೆಯ ನಾಲ್ಕು ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಮಕ್ಕಳಿಗೆ ರಜೆ ನೀಡಲಾಗಿದೆ.
ನಾಳೆ ಮಳೆ ಹೆಚ್ಚಾಗುವ ಲಕ್ಷಣವಿದ್ದ ತಾಲೂಕುಗಳಾದ ಶಿರಸಿ(Sirsi), ಸಿದ್ದಾಪುರ(Siddapur), ಯಲ್ಲಾಪುರ(Yallapur) ಮತ್ತು ಜೋಯಿಡಾ(Joida) ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಜುಲೈ ರಜೆ (Holiday) ಘೋಷಿಸಲಾಗಿದೆ.
ಮಕ್ಕಳ ಸುರಕ್ಷತಾ ಹಿತದೃಷ್ಟಿಯಿಂದ ಮತ್ತು ಯಾವುದೇ ಅನಾನುಕೂಲ ಹಾಗೂ ಅವಘಡಗಳು ಸಂಭವಿಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಮೇಲಿನ ತಾಲೂಕುಗಳಿಗೆ ಮಾತ್ರ ರಜೆ ಘೋಷಿಸಿ (Holiday Declared) ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಆದೇಶ ಮಾಡಿದ್ದಾರೆ.
ಈ ಆದೇಶವನ್ನು, ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಾರವಾರ, ಶಿರಸಿ ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ ರವರು ಕಾರ್ಯ ರೂಪಕ್ಕೆ ತರುವಂತೆ ತಿಳಿಸಲಾಗಿದೆ. ಈ ರಜಾ ಅವಧಿಯನ್ನು ಮುಂದಿನ ದಿನಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳುವಂತೆ ಆದೇಶದಲ್ಲಿ ತಿಳಿಸಿದ್ದಾರೆ.
ಇದನ್ನು ಓದಿ : ಕದ್ರಾ-ಕೊಡ್ಸಳ್ಳಿ ಮಾರ್ಗದಲ್ಲಿ ಗುಡ್ಡ ಕುಸಿತ. ಹಿಂದೆ ಎಚ್ಚರಿಕೆ ನೀಡಿದ್ದ ಭೂ ವಿಜ್ಞಾನಿಗಳು
ಕಡಲೆ ಬೀಜ ತಂದ ಆಪತ್ತು. ಉಬ್ಬಸ ಸಮಸ್ಯೆಯಿಂದ ಮುಕ್ತಿ ಪಡೆದ ರೋಗಿ
.
