ಭಟ್ಕಳ(Bhatkal):  ಪ್ರಮುಖ ಆಕರ್ಷಣೆ ಹಾಗೂ ಅಪರೂಪದ ಹರಕೆಯ ಜಾತ್ರೆ ಭಟ್ಕಳ ತಾಲೂಕಿನ ಹೆಬಳೆಯಲ್ಲಿ ಪ್ರತಿ ವರ್ಷ ನಡೆಯುತ್ತಾ ಬಂದಿದೆ. ಮಕರ ಸಂಕ್ರಮಣದ ಸಂದರ್ಭದಲ್ಲಿ  ಶೇಡಬರಿ(Shedabari) ಜಟಕಾ ಮಹಾಸತಿ ದೇವಿಯ ಜಾತ್ರೆಯು(Jataka mahasati Devi Jaatre) ಅದ್ದೂರಿಯಿಂದ ಮುಕ್ತಾಯಗೊಂಡಿತು.

ಭಕ್ತರು ಶೇಡಿ ಮರವನ್ನು ಏರಿ ಸಿಂಗಾರವನ್ನು ಎಸೆಯುವುದು ರೂಢಿಯಲ್ಲಿದೆ. ದೇವರಿಗೆ ಹರಕೆ, ಕಾಣಿಕೆ ಹಾಗೂ ಪೂಜೆಗಳನ್ನ ನೀಡಿ  ಇಷ್ಟಾರ್ಥಕ್ಕಾಗಿ ಪ್ರಾರ್ಥಿಸುತ್ತಾರೆ. ಇಲ್ಲಿ ಹರಕೆ ಹೊತ್ತವರಿಗೆ ಅವರ ಬೇಡಿಕೆ ಈಡೇರಿದ ಸಾಕಷ್ಟು ಉದಾಹರಣೆಗಳಿವೆ. ಸಂತಾನ ಭಾಗ್ಯ, ಸಿಡುಬು ಸೇರಿದಂತೆ ಸಾಕಷ್ಟು ಕಾಯಿಲೆಗೆ ಇಲ್ಲಿನ ದೇವರ ಶಕ್ತಿಯಿಂದ ಕಡಿಮೆಯಾಗಿ ಸಂತಸದಿಂದ ಭಕ್ತರು ಜೀವನ ನಡೆಸುತ್ತಾ ಬಂದಿದ್ದಾರೆ. ಹೀಗಾಗಿ ದೇವರ ಸೇವೆಯನ್ನು ಮುಂದುವರೆಸಿಕೊಂಡು ಬರುತ್ತಿದ್ದಾರೆ.

ರಾಜ್ಯದ ನಾನಾ ಮೂಲೆಯಿಂದ ಭಕ್ತರು ಆಗಮಿಸಿ ಇಲ್ಲಿ ಹರಕೆ, ಕಾಣಿಕೆಗಳನ್ನು ಸಲ್ಲಿಸುವದುಂಟು. ಶೇಡಿಮರ ಏರುವ ಹರಕೆ ಹೊತ್ತವರು ದೇವಸ್ಥಾನಕ್ಕೆ ಬಂದು ದೇವರಿಗೆ ಪೂಜೆಯನ್ನು ಸಲ್ಲಿಸಿ ದೇವಸ್ಥಾನದ ಎದುರಿನಲ್ಲಿ ಶೃಂಗರಿಸಿದ್ದ ಶೇಡಿಮರದಲ್ಲಿ ಕುಳಿತು ಮೂರು ಸುತ್ತು ತಿರುಗಿದ ಬಳಿಕ ಶೇಡಿ ಮರದ ಮೇಲೆ ಕುಳಿತು ಅವರು ತಾವು ತಂದಿದ್ದ ಸಿಂಗಾರ ಹೂವು, ಬಾಳೆ ಹಣ್ಣನ್ನು ಕೆಳಗಡೆಯಿರುವ ಭಕ್ತರ ಮೇಲೆ ಎಸೆಯುತ್ತಾರೆ.  ಇದು ದೇವರ ಪ್ರಸಾದವೆಂದು ಭಕ್ತರು ಭಕ್ತಿಯಿಂದ ಸ್ವೀಕರಿಸುತ್ತಾರೆ.  ತಮ್ಮ ಕಷ್ಟ ಕಾಲದಲ್ಲಿ ಶೇಡಬರಿ ಮಹಾಸತಿ ದೇವಿಯ ಬಳಿ ಶೇಡಿಮರ ಏರುವುದಾಗಿ ಹೇಳಿಕೆ ಮಾಡಿಕೊಂಡರೆ, ಆ ಕಷ್ಟಗಳು ಪರಿಹಾರವಾಗಿ ಸುಖ, ಸಮೃದ್ಧಿ ಲಭಿಸುತ್ತದೆ ಎಂಬ ನಂಬಿಕೆ ಮಹಾಸತಿ ದೇವಿಯ(Mahasati Devi) ಭಕ್ತರಲ್ಲಿ ಇದೆ. ಆ ಹರಕೆಯನ್ನು ಜಾತ್ರೆಯ ಸಂದರ್ಭದಲ್ಲಿ ಸಲ್ಲಿಸುವುದು ಈ ಹಿಂದಿನಿಂದಲೂ ನಡೆದುಕೊಂಡು ಬಂದ ವಾಡಿಕೆ.

ಎರಡು ದಿನಗಳ ಜಾತ್ರೆಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ದೇವಸ್ಥಾನದ ಆಡಳಿತ ಮಂಡಳಿಯಿಂದ ಎರಡೂ ದಿನಗಳ ಕಾಲ ಭಕ್ತರಿಗೆ ಅನುಕೂಲವಾಗುವ ವ್ಯವಸ್ಥೆಗಳನ್ನು ಮಾಡಿಕೊಡಲಾಯಿತು. ಜಾತ್ರೆಯ ಅಂಗವಾಗಿ ಭಕ್ತರು ಶೆಡಬರಿ ಜಟಕಾ ಮಹಾಸತಿ ದೇವಿಗೆ ಹಾಗೂ ಪರಿವಾರ ದೇವರಿಗೆ ಸಿಂಗಾರದ ಹೂವಿನ ವಿಶೇಷಪೂಜೆ, ಕಾಣಿಕೆಗಳನ್ನು ಸಲ್ಲಿಸಿ, ತೀರ್ಥಪ್ರಸಾದ ಸ್ವೀಕರಿಸಿದರು.

ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಪರಮೇಶ್ವರ ದೇವಾಡಿಗ, ಕಾರ್ಯದರ್ಶಿ ಈರಪ್ಪ ನಾಯ್ಕ ಹಾಗೂ ಎಲ್ಲಾ ಸದಸ್ಯರು ಜಾತ್ರೆಗೆ ಬಂದ ಭಕ್ತರ ಪೂಜೆಗೆ, ಹರಕೆ ಸಲ್ಲಿಸುವುದಕ್ಕೆ ಸಹಕರಿಸಿದರು.

ಇದನ್ನು ಓದಿ : ಸರ್ಕಾರಿ ನೌಕರರಿಗೆ ಶುಕ್ರದೆಸೆ. ಎಂಟನೇ ವೇತನ ಆಯೋಗ ರಚನೆಗೆ ಕೇಂದ್ರದ ಅಸ್ತು.

ಗುಂಡಿನ ದಾಳಿ. ಓರ್ವನ ಹತ್ಯೆಗೈದು 93ಲಕ್ಷ ರೂ. ಹಣದೊಂದಿಗೆ ಇಬ್ಬರು ಎಸ್ಕೇಪ್.

ನಟ ಸೈಪ್ ಅಲಿ ಖಾನ್ ಮೇಲೆ ಆಟ್ಯಾಕ್. ಕಳ್ಳತನಕ್ಕೆ ಬಂದವರ ಜೊತೆ ಹೋರಾಡಿದ ನಟ.

ವೈಭವದೊಂದಿಗೆ ಸಂಪನ್ನಗೊಂಡ ಮಾರಿಜಾತ್ರಾ ಮಹೋತ್ಸವ. ಲಕ್ಷಕ್ಕೂ ಅಧಿಕ ಸಂಖ್ಯೆಯ ಭಕ್ತರಿಂದ ದೇವಿಯ ದರ್ಶನ.