ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಭಟ್ಕಳ(Bhatkal): ಮಹಾಶಿವರಾತ್ರಿ ಮಹಾ ಪರ್ವದ(Maha Shivaratri Mahaparva) ದಿನವಾದ ಇಂದು ಪ್ರಸಿದ್ದ ಧಾರ್ಮಿಕ ಸ್ಥಳ ಮುರ್ಡೇಶ್ವರದಲ್ಲಿ (Murdeshwar) ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಶಿವನ ದರ್ಶನ ಪಡೆಯುತ್ತಿದ್ದಾರೆ.

ಮುಂಜಾನೆ 3.30 ಗಂಟೆಯಿಂದ ದೇವರ ದರ್ಶನಕ್ಕೆ  ಅವಕಾಶ ಮಾಡಿ ಕೊಟ್ಟಿದ್ದರಿಂದ  ಭಕ್ತರು ದೇವಾಲಯಕ್ಕೆ ಆಗಮಿಸಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಪುನಸ್ಕಾರ ಸಲ್ಲಿಸುತ್ತಿದ್ದಾರೆ.  ಭಟ್ಕಳ (Bhatkal) ಪ್ರಭಾರಿ ಸಹಾಯಕ ಆಯುಕ್ತೆ ಕಾವ್ಯ ರಾಣಿ ಕೂಡ ತಮ್ಮ ಕುಟುಂಬ ಸಮೇತರಾಗಿ ಆಗಮಿಸಿ  ಶಿವನ ದರ್ಶನ ಪಡೆದರು.

ಶಿವನ ಪಂಚಕ್ಷೇತ್ರಗಳಲ್ಲೊಂದಾದ ಶ್ರೀ ಮುರ್ಡೇಶ್ವರದಲ್ಲಿ ಭಕ್ತರ ಸಾಲು ದೇವಸ್ಥಾನದ ಹೊರಾಂಗಣದ ವರೆಗೂ ಸಾಲು ಬಂದಿತ್ತು. ದೇವಸ್ಥಾನದಲ್ಲಿ ಶಿವರಾತ್ರಿ(Shivaratri) ಪ್ರಯುಕ್ತ ಧಾರ್ಮಿಕ ಕಾರ್ಯಗಳು ನಡೆಯಿತು. ಪರಶಿವನಿಗೆ ರುದ್ರಾಭಿಷೇಕ, ಜಲಾಭಿಷೇಕ, ಬಿಲ್ವಪತ್ರ ಅರ್ಚನೆ ಮುಂತಾದ ಕಾರ್ಯಗಳು ನಡೆಯಿತು.

ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಮುರ್ಡೇಶ್ವರಕ್ಕೆ ಭೇಟಿ ನೀಡಿದ ಭಕ್ತಾಧಿಗಳು ಸಮುದ್ರಸ್ನಾನ ಮಾಡಿ ದೇವರಿಗೆ ವಿವಿಧ ರೂಪದಲ್ಲಿ ಅಭಿಷೇಕದೊಂದಿಗೆ ವಿಶೇಷ ಪೂಜೆ ಪುನಸ್ಕಾರ ಸಲ್ಲಿಸಿದರು.  ಸಮುದ್ರತೀರ ಮತ್ತು ದೇವಸ್ಥಾನದ ಸುತ್ತಮುತ್ತ ಜನಜಾತ್ರೆಯೇ ನೆರೆದಿತ್ತು.

ಬೆಳಿಗ್ಗೆ ಭಟ್ಕಳ ಸುತ್ತಮುತ್ತಲಿನ ಭಕ್ತರು ಪಾದಯಾತ್ರೆಯ ಮೂಲಕ ಮುರ್ಡೇಶ್ವರಕ್ಕೆ ಆಗಮಿಸಿದರು.  ಈ ಬಾರಿ ಸ್ಥಳೀಯ ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಿದ್ದಾರೆ. ಅವರ ಜೊತೆಯಲ್ಲಿ ಮುರ್ಡೇಶ್ವರ(Murdeshwar) ಮಹಿಳಾ ಭಜನಾ ಮಂಡಳದ್ದಿಂದ ಕೂಡ ಸ್ವಯಂ ಸೇವಕರಾಗಿ ಕಾರ್ಯ ನಿರ್ವಹಿಸಿದ್ದಾರೆ

ಮುರ್ಡೇಶ್ವರ ಕೇವಲ ಧಾರ್ಮಿಕ ಕ್ಷೇತ್ರವಷ್ಟೇ ಅಲ್ಲ, ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರವಾಸಿ ಕೇಂದ್ರವಾಗಿಯೂ ಖ್ಯಾತಿ ಪಡೆದಿದೆ. ನಿತ್ಯ ಸಾವಿರಾರು ಭಕ್ತಾಧಿಗಳು ಮುರ್ಡೇಶ್ವರಕ್ಕೆ ಭೇಟಿ ನೀಡುತ್ತಾರೆ. ಶಿವರಾತ್ರಿ ಸೇರಿದಂತೆ ವಿಶೇಷ ದಿನಗಳಲ್ಲಿ ಮತ್ತಷ್ಟು ಜನಜಂಗುಳಿ ನೆರೆದಿರುತ್ತದೆ. ದರ್ಶನಕ್ಕೆ ಬಂದಂತಹ ಎಲ್ಲಾ ಭಕ್ತರಿಗೂ ಪಾನೀಯ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು

ಇದನ್ನು ಓದಿ : ಎಚ್ಚರ! ಶಿರಸಿಗೂ ಒಕ್ಕರಿಸಿತು ಮಂಗನ ಕಾಯಿಲೆ.

ಕೇಣಿ ಮತ್ತು ಕಾಸರಕೋಡು ಗ್ರಾಮದಲ್ಲಿ ನಿಷೇದಾಜ್ಞೆ ಮುಂದುವರಿಕೆ

ಪೊಲೀಸ್ ಸರ್ಪಗಾವಲಿನ ನಡುವೆ ಸರ್ವೆ. ನಿಷೇದಾಜ್ಞೆ ನಡುವೆ ನಾಗರಿಕರ ಬೃಹತ್ ಪ್ರತಿಭಟನೆ.