ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) : ಮಾರಕ ಕ್ಯಾನ್ಸರ್ ಶಸ್ತ್ರ ಚಿಕಿತ್ಸೆ ಮುಗಿಸಿ ವಿಶ್ರಾಂತಿ ಪಡೆಯುತ್ತಿರುವ ನಟ ಶಿವರಾಜ್ಕುಮಾರ್ (Sh8varajakumar) ಕರುನಾಡಿಗೆ ಬರುವ ತವಕದಲ್ಲಿದ್ದಾರೆ. ಜನವರಿ 26 ಗಣರಾಜ್ಯೋತ್ಸವ ದಿನದಂದು(Republic Day) ಬೆಂಗಳೂರಿಗೆ (Bangalore) ವಾಪಸ್ಸಾಗುತ್ತೇನೆ ಎಂದು ಶಿವಣ್ಣ(Shivanna) ಸಿಹಿ ಸುದ್ದಿ ನೀಡಿದ್ದಾರೆ.
ಬೆಂಗಳೂರಿಗೆ ಬರುವ ಬಗ್ಗೆ ನಟ ಶಿವಣ್ಣ ವೀಡಿಯೋ ಮಾಡಿ ಅಭಿಮಾನಿಗಳೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ. ಅಭಿಮಾನಿಗಳ ಎಲ್ಲಾ ಪ್ರೀತಿ ಮತ್ತು ಹಾರೈಕೆಗಳಿಗೆ ನಟ ಧನ್ಯವಾದ ಹೇಳಿದ್ದಾರೆ.
ಎಲ್ಲರಿಗೂ ನಮಸ್ಕಾರ, ನಾನು ನಿಮ್ಮ ಪ್ರೀತಿಯ ಶಿವರಾಜಕುಮಾರ್. ನಿಮ್ಮ ಪ್ರೀತಿ ಮತ್ತು ಅಭಿಮಾನಕ್ಕೆ ನಾನು ಸದಾ ಚಿರಋಣಿ. ಜನವರಿ 26ರ ಗಣರಾಜ್ಯೋತ್ಸವದಂದು ನಿಮ್ಮೆಲ್ಲರನ್ನು ನೋಡಲು ಬೆಂಗಳೂರಿಗೆ ಬರುತ್ತೇನೆ ಎಂದು ನಟ ಶಿವರಾಜಕುಮಾರ್ ಅಭಿಮಾನಿಗಳಿಗೆ ತಿಳಿಸಿದ್ದಾರೆ.
ಜನವರಿ 26ರಂದು ಜೀ ಕನ್ನಡ(Zee Kannada) ವಾಹಿನಿಯಲ್ಲಿ ಭೈರತಿ ರಣಗಲ್ ಚಿತ್ರ ಪ್ರಸಾರರವಾಗಲಿದೆ. ಆ ಚಿತ್ರವನ್ನು ನೋಡಿ ಎಂದು ಹೇಳಿದ್ದಾರೆ. ಕ್ಯಾನ್ಸರ್ ಸರ್ಜರಿಗೆ(Cancer Surgery) ಒಳಗಾಗಿದ್ದ ಖ್ಯಾತ ನಟ ಶಿವರಾಜ್ ಕುಮಾರ್ ಶಸ್ತ್ರಚಿಕಿತ್ಸೆ ಯಶಸ್ಸಿನ ಬೆನ್ನಲ್ಲೇ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅಮೇರಿಕಾದ(America) ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ನಲ್ಲಿ ಶಿವಣ್ಣ ಅವರಿಗೆ ಇತ್ತೀಚೆಗೆ ಸರ್ಜರಿ ನಡೆದಿತ್ತು. ಬಳಿಕ ಅವರಿಗೆ ಎರಡು ಬಾರಿ ಮೆಡಿಕಲ್ ಚೆಕಪ್ ಆಗಿತ್ತು. ಇದೀಗ ಈ ಪ್ರಕ್ರಿಯೆ ಕೂಡ ಪೂರ್ಣಗೊಂಡಿದ್ದು, ಶಿವಣ್ಣ ಕ್ಯಾನ್ಸರ್ನಿಂದ ಗುಣಮುಖರಾಗಿದ್ದಾರೆ.
ಇದನ್ನು ಓದಿ : ಹಸುವಿನ ಹತ್ಯೆ ಪ್ರಕರಣದಲ್ಲಿ ಓರ್ವನ ಸೆರೆ. ಪ್ರಮುಖ ಆರೋಪಿಗಳಿಗಾಗಿ ಮುಂದುವರಿದ ತಲಾಶ್.
ಹಿಚ್ಕಡ ಬಯಲು ರಂಗಮಂದಿರದ ಯಕ್ಷಪ್ರದರ್ಶನಕ್ಕೆ 50ರ ಸಂಭ್ರಮ; ಯಕ್ಷಪಟುಗಳಿಗೆ ಸನ್ಮಾನ