ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಹರ್ಯಾಣ(Haryan): ಹರಿಯಾಣದ ರೋಹ್ಟಕ್ ಜಿಲ್ಲೆಯ ಬಸ್ ನಿಲ್ದಾಣದ ಬಳಿ ಸಿಕ್ಕ ಸೂಟ್ ಕೇಸ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತೆ(Congres worker) ಶವ ಪತ್ತೆಯಾಗಿದೆ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ನೇತೃತ್ವದಲ್ಲಿ ನಡೆದಿದ್ದ ಭಾರತ್ ಜೋಡೋ ಯಾತ್ರೆಯಲ್ಲಿ(Bharat Jodo Yatre) ಕಾಣಿಸಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ (22 ಶವವಾಗಿ ಪತ್ತೆಯಾಗಿದ್ದಾರೆ.
ಹಿಮಾನಿ ನರ್ವಾಲ್ ಸಾವಿನ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಕಾಂಗ್ರೆಸ್ ಆಗ್ರಹಿಸಿದೆ. ಸಂಪ್ಲಾ ಬಸ್ ನಿಲ್ದಾಣದ ಬಳಿ ಸಾರ್ವಜನಿಕರು ಸೂಟ್ ಕೇಸ್ ಇರುವುದನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕಾಗಮಿಸಿದ ಪೊಲೀಸರು ಸೂಟ್ ಕೇಸ್ ತೆಗೆದು ನೋಡಿದಾಗ ಶವ ಇರುವುದು ಗೊತ್ತಾಗಿದೆ. ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಹಿಮಾನಿ ಸಾವಿನ ಬಗ್ಗೆ ಎಸ್ಐಟಿ(SIT) ರಚನೆ ಮಾಡಿ ತನಿಖೆ ನಡೆಸುವಂತೆ ಕಾಂಗ್ರೆಸ್ ಶಾಸಕರು(Congres MLA) ಒತ್ತಾಯಿಸಿದ್ದಾರೆ.
ಇದನ್ನು ಓದಿ : ಕನ್ನಡದ ಕವಿತೆಯೊಂದಿಗೆ ದೆಹಲಿಗೆ ರೇಣುಕಾ ರಮಾನಂದ.
ಕೋವಿಡ್ ಸಮಯದಲ್ಲಿ ಏರಿಸಿದ ರೈಲ್ವೆ ಟಿಕೆಟ್ ಈಗ ಇಳಿಕೆ.