ಶಿರಸಿ(Sirsi): ಉತ್ತರಕನ್ನಡ ಜಿಲ್ಲೆಯು ಜೇನು ಕೃಷಿಯ(Honey Krushi) ತವರೂರು, ಜಿಲ್ಲೆಯ ಬಹಳಷ್ಟು ರೈತರು ಜೇನು ಕೃಷಿಯಲ್ಲಿ ಉತ್ತಮ ಸಾಧನೆ ಮಾಡಿದ್ದು, ರಾಜ್ಯದ ಇತರ ಪ್ರದೇಶಗಳಿಗೆ ಮಾದರಿಯಾಗಿದ್ದಾರೆ ಎಂದು ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ಹುಬ್ಬಳ್ಳಿ ವಿಭಾಗದ ನಿರ್ದೇಶಕ ಬಸವರಾಜ ಹೇಳಿದರು.

ರಾಜ್ಯ ಮಟ್ಟದ ಜೇನು ಕೃಷಿ ಕಾರ್ಯಾಗಾರ(Workshop) ಉದ್ಘಾಟಿಸಿ ಮಾತನಾಡಿದರು.  ಉತ್ತರಕನ್ನಡ ಜಿಲ್ಲೆಯಲ್ಲಿ ಸ್ಕೊಡ್‌ವೆಸ್ (Scodwes)ಸಂಸ್ಥೆಯೊಂದಿಗೆ ಕ್ಲಸ್ಟರ್ ಮಟ್ಟದ ಜೇನು ಉತ್ಪಾದಕರ ಗುಂಪುಗಳನ್ನು ರಚಿಸಿ ಜೇನಿನ ಮೌಲ್ಯವರ್ಧನ ಚಟುವಟಿಕೆಗಳನ್ನು ವಿಸ್ತರಿಸಲಾಗುವುದು ಎಂದರು.

ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ವೆಂಕಟೇಶ ನಾಯ್ಕ ಅವರು ಉತ್ತರಕನ್ನಡ ಜಿಲ್ಲೆಯ ಜೇನು ಕೃಷಿಯ ಸಾಧಕ-ಬಾಧಕಗಳ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. 

ಮುಖ್ಯ ಅತಿಥಿಗಳಾಗಿದ್ದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಡಾ. ಅಜ್ಜಯ್ಯ ಆರ್. ಶಿರಸಿ ಅರಣ್ಯ ಮಹಾವಿದ್ಯಾಲಯದ ಡೀನ್ ಡಾ. ವಾಸುದೇವ,ಸ್ಕೊಡ್‌ವೆಸ್ ಸಂಸ್ಥೆಯ ಕಾರ್ಯದರ್ಶಿಗಳಾದ ಸರಸ್ವತಿ ಎನ್ ರವಿ, ಕಾರ್ಯಕಾರಿ ಮಂಡಳಿಯ ಸದಸ್ಯರಾದ ಪ್ರೊ. ಕೆ ಎನ್  ಹೊಸಮನಿರವರು ಸಂದರ್ಭೋಚಿತವಾಗಿ ಮಾತನಾಡಿದರು.

ಆರಂಭದಲ್ಲಿ ಸ್ಕೊಡ್‌ವೆಸ್ ಸಂಸ್ಥೆಯ ಕಾರ್ಯಕ್ರಮಾಧಿಕಾರಿ ನಾರಾಯಣ ಹೆಗಡೆ  ಸ್ವಾಗತಿಸಿದರು. ಕಾರ್ಯಕ್ರಮ ಸಂಯೋಜಕ ಗಂಗಾಧರ ನಾಯ್ಕ  ನಿರ್ವಹಿಸಿ ಕೊನೆಯಲ್ಲಿ ವಂದಿಸಿದರು. 

ರಾಜ್ಯ ಮಟ್ಟದ ಈ ಕಾರ್ಯಕ್ರಮದ ಈ ಕಾರ್ಯಾಗಾರದಲ್ಲಿ ವಿಶೇಷ ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ಮಧುಕೇಶ್ವರ ಹೆಗಡೆ ಹಾಗೂ ಡಾ. ಡೈಸಿ ಥಾಮಸ್‌ರವರು ಹಲವಾರು ಉದಾಹರಣೆಗಳ ಸಮೇತ ತರಬೇತಿ ನೀಡಿದರು. ಕಾರ್ಯಕ್ರಮದಲ್ಲಿ ತುಡ್ವಿ ಜೇನು ಉತ್ಪಾದಕ ಸಂಸ್ಥೆಗಳ ಪದಾಧಿಕಾರಿಗಳು, ವಿವಿಧ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು, ಜೇನು ಉತ್ಪಾದಕ ಸಂಸ್ಥೆಗಳು ಹಾಗೂ ಪ್ರಮುಖರು, ಆಸಕ್ತ ರೈತರು ಸೇರಿದಂತೆ ಉತ್ತರ ಕನ್ನಡ, ಹಾವೇರಿ, ಶಿವಮೊಗ್ಗ ಜಿಲ್ಲೆಗಳ ಸುಮಾರು 250ಕ್ಕೂ ಹೆಚ್ಚು ಜೇನು ಕೃಷಿಕರು, ಮೌಲ್ಯ ವರ್ಧಕರು ಉಪಸ್ಥಿತರಿದ್ದರು.

ಇದನ್ನು ಓದಿ : ಇಂದು ಮತ್ತು ನಾಳೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆ

ಶಿರಸಿಯಲ್ಲಿ ಬಸ್ ಇಲ್ಲದೆ ಹೆಣ್ಣುಮಕ್ಕಳಿಗೆ ತೊಂದರೆ

ಭಟ್ಕಳದಲ್ಲಿ ಗೋವು ಕಳ್ಳರ ಅಟ್ಟಹಾಸ

ಟೋಲ್ ಪ್ಲಾಜಾ ಸ್ಥಳಾಂತರಿಸುವಂತೆ ಬದನಗೋಡು ಗ್ರಾಮಸ್ಥರ ಆಗ್ರಹ