ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಭಟ್ಕಳ(Bhatkal):  ಜಮ್ಮು ಕಾಶ್ಮೀರದ ಪೂಂಚ್ ನಲ್ಲಿ ಕರ್ತವ್ಯದಲ್ಲಿದ್ದಾಗ ಸೇನಾ ವಾಹನ ದುರಂತದಲ್ಲಿ ಹುತಾತ್ಮರಾದ  ಅನೂಪ್ ಪೂಜಾರಿ ಕುಟುಂಬಕ್ಕೆ ಭಟ್ಕಳ(Bhatkal) ತಾಲೂಕು ಮಾಜಿ ಸೈನಿಕರ ಸಂಘದಿಂದ ಆರ್ಥಿಕ ಸಹಾಯ ಮಾಡಲಾಯಿತು.

ಡಿಸಂಬರ್ 24 ರಂದು ಅನೂಪ್ ಪೂಜಾರಿ ಹುತಾತ್ಮರಾಗಿದ್ದರು. ಆರ್ಥಿಕ ನೆರವು ನೀಡುವ ಉದ್ದೇಶದಿಂದ ಭಟ್ಕಳ ತಾಲೂಕು ಮಾಜಿ ಸೈನಿಕರ ಸಂಘದಿಂದ ಭಟ್ಕಳದ ಮಾಜಿ ಸೈನಿಕರು ಹಾಗೂ ಸೇವಾನಿರತ ಸೈನಿಕರ ಧನಸಹಾಯದ ಮೂಲಕ 60 ಸಾವಿರ ಹಣವನ್ನು ಸಂಗ್ರಹಿಲಾಗಿತ್ತು.  ಭಟ್ಕಳದ ಮಾಜಿ ಸೈನಿಕರ ಸಂಘದ ಕಾರ್ಯದರ್ಶಿ ಶ್ರೀಕಾಂತ ನಾಯ್ಕ ಅವರ ನೇತೃತ್ವದಲ್ಲಿ ಮಾಜಿ ಸೈನಿಕ ಸಂಘದ ಸದಸ್ಯರಾದ ಹನುಮಂತ ನಾಯ್ಕ, ಕೇಶವ ನಾಯ್ಕ ಹಾಗೂ ಊರಿನ ಪ್ರಮುಖರಾದ ಭವಾನಿಶಂಕರ ನಾಯ್ಕ ಅವರು ಕುಂದಾಪುರದ ಬಿಜಾಡಿಯಲ್ಲಿನ ಹುತಾತ್ಮ ಸೈನಿಕ ಅನೂಪ್ ಪೂಜಾರಿಯವರ ಸ್ವಗೃಹಕ್ಕೆ ತೆರಳಿ ಅವರ ಧರ್ಮಪತ್ನಿ ಹಾಗೂ ಅವರ ತಾಯಿಯವರಿಗೆ ಸಾಂತ್ವನ ಹೇಳಿದರು.

ತಲಾ 30 ಸಾವಿರದಂತೆ (ಒಟ್ಟೂ 60 ಸಾವಿರ) ಅವರ ಧರ್ಮಪತ್ನಿ ಹಾಗೂ ತಾಯಿಯವರಿಗೆ ಡಿ. ಡಿ. ಹಸ್ತಾಂತರಿಸಿದರು. ಇದೇ ಸಂದರ್ಭದಲ್ಲಿ ತಾಲೂಕು ಮಾಜಿ ಸೈನಿಕರ ಸಂಘದ ಅಧ್ಯಕ್ಷ  ಎಮ್ ಡಿ ಪಕ್ಕಿ ಅವರು ಪೋನ್ ಕರೆ ಮೂಲಕ ಅನೂಪ್ ಪೂಜಾರಿಯವರ ಧರ್ಮಪತ್ನಿ ಹಾಗೂ ತಾಯಿಯವರಿಗೆ ಸಾಂತ್ವನ ಹೇಳಿದರು.

ಅದೇ ರೀತಿ, ಹುತಾತ್ಮ  ಅನೂಪ್ ಪೂಜಾರಿಯವರ ಧರ್ಮಪತ್ನಿ ಬಿಎಸ್ಸಿ ಪದವೀಧರರಾಗಿದ್ದು, ಚಿಕ್ಕ ಮಗಳನ್ನು ಹೊಂದಿದ್ದು ಅವರ ಮುಂದಿನ ಜೀವನ ನಿರ್ವಹಣೆಗಾಗಿ ಅನುಕಂಪದ ಆಧಾರದ ಮೇಲೆ ಕೇಂದ್ರ ಸರ್ಕಾರದ ಅಥವಾ ರಾಜ್ಯ ಸರ್ಕಾರದ ಯಾವುದಾದರೂ ಇಲಾಖೆಯಲ್ಲಿ ಸರ್ಕಾರಿ ಹುದ್ದೆಗಾಗಿ ವಿವಿಧ ಹಂತದಲ್ಲಿ ಪ್ರಯತ್ನ ನಡೆಯುತ್ತಿದ್ದು, ಈ ಕುರಿತು ಶೀಘ್ರ ಕ್ರಮಕ್ಕಾಗಿ ಸಂಬಂಧಿಸಿದ ಇಲಾಖೆಗೆ ಶಿಪಾರಸ್ಸು ಮಾಡುವಂತೆ ಉಡುಪಿ ಜಿಲ್ಲೆಯ ಪ್ರಸ್ತುತ ಸಂಸದ  ಕೋಟಾ ಶ್ರೀನಿವಾಸ ಪೂಜಾರಿಯವರಿಗೆ ನಮ್ಮ ಸಂಘದ ವತಿಯಿಂದ ಮನವಿ ಪತ್ರ ನೀಡುವ ಬಗ್ಗೆಯೂ ತಿಳಿಸಲಾಯಿತು.
ಇದನ್ನು ಓದಿ : ಸ್ಟಾರ್ ಚಾಯ್ಸ್ ಕಲಾ ಕೇಂದ್ರದಲ್ಲಿ ಚಿಣ್ಣರ ಚಿಲಿಪಿಲಿ ಆರಂಭ.

ಕಾಳಿ ಹಳೆ ಸೇತುವೆ ತೆರವುಗೊಳಿಸುವ ವೇಳೆ ಘಟನೆ.

ಪಾಪ ಮೊನಾಲಿಸಾ. ಆಫರ್ ನೀಡಿದ್ದ ನಿರ್ದೇಶಕ ಆರೆಸ್ಟ್.