ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news)ಬೆಂಗಳೂರು(Bangalore): ಕನ್ನಡ ಚಿತ್ರರಂಗ ಹಿರಿಯ ನಟ ಬ್ಯಾಂಕ್ ಜನಾರ್ಧನ್(Bank Janardhana) ದೀರ್ಘ ಕಾಲದ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ.
ಅವರಿಗೆ 76 ವರ್ಷ ವಯಸ್ಸಾಗಿತ್ತು. ಸೋಮವಾರ ರಾತ್ರಿ 2.30ರ ಸುಮಾರಿಗೆ ಬ್ಯಾಂಕ್ ಜನಾರ್ಧನ್(Bank Janardhan) ನಿಧನ ಹೊಂದಿದ್ದಾರೆ. 1949ರಲ್ಲಿ ಚಿತ್ರದುರ್ಗದ ಹೊಳಲಕೆರೆಯಲ್ಲಿ (Chitradurga Holalakere) ಜನಿಸಿದ ಬ್ಯಾಂಕ್ ಜನಾರ್ಧನ್ 1985ರಲ್ಲಿ ‘ಪಿತಾಮಹ’ ಚಿತ್ರದ ಮೂಲಕ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟರು.
‘ಬೆಟ್ಟದ ತಾಯಿ’, ‘ಪೊಲೀಸ್ ಹೆಂಡತಿ’, ‘ಶ್.., ‘ತರ್ಲೆ ನನ್ಮಗ’ ಹೀಗೆ ಹಲವು ಚಿತ್ರಗಳಲ್ಲಿ ಅವರು ನಟಿಸಿದ್ದರು. 2016ರಿಂದ ಈಚೆಗೆ ಅವರು ಚಿತ್ರರಂಗದಲ್ಲಿ ಅಷ್ಟಾಗಿ ಆ್ಯಕ್ಟಿವ್ ಆಗಿರಲಿಲ್ಲ. 2022ರ ‘ಮಠ’ ಹಾಗೂ 2023ರ ‘ಉಂಡೇನಾಮ’ ಚಿತ್ರದಲ್ಲಿ ಅವರು ನಟಿಸಿದ್ದರು ಬ್ಯಾಂಕ್ ಜನಾರ್ಧನ್.
ಜನಾರ್ಧನ್ ಅವರು ಚಿತ್ರದುರ್ಗದ ಸಮೀಪದ ಹೊಳಲ್ಕೆರೆ ಬಳಿಯ ಬ್ಯಾಂಕ್ ಒಂದರಲ್ಲಿ ಕೆಲಸ ಮಾಡಿದ್ದರು. ನಾಟಕ, ಚಲನಚಿತ್ರಗಳಲ್ಲಿ ಬಾಗಿಯಾಗುತ್ತಿದ್ದರು. ಬಳಿಕ ಬ್ಯಾಂಕ್ ಜನಾರ್ಧನ ಎಂದು ಪ್ರಖ್ಯಾತಿ ಅವರಿಗೆ ಬಂದಿತ್ತು. ಬ್ಯಾಂಕ್ ಜನಾರ್ಧನ ನಿಧನಕ್ಕೆ ನಾಡಿನ ಗಣ್ಯರು ಕಂಬನಿ ಮಿಡಿದಿದ್ದಾರೆ.
ಇದನ್ನು ಓದಿ : ಬೈಕ್ ತೆಗೆಯುತ್ತಿದ್ದಾಗ ಬಂದ ಜವರಾಯ.