ಉಡುಪಿ  :  ಬಾರೀ ಮಳೆಯನ್ನು ಲೆಕ್ಕಿಸದೇ ಉಡುಪಿ ಜಿಲ್ಲೆಯ ಅಲೆವೂರಿನಲ್ಲಿ  ಬಬ್ಬು ಸ್ವಾಮಿ ದೈವದ ನೇಮೋತ್ಸವ ಅದ್ದೂರಿಯಿಂದ ನಡೆಯಿತು.

ಕರಾವಳಿ ಭಾಗದಲ್ಲಿ ದೈವಾರಾಧನೆ ಬಹಳ ಶ್ರದ್ಧೆಯಿಂದ ನಡೆಯುತ್ತಿದೆ.  ದೈವ ನರ್ತಕರಾದ ರವಿ ಪಡ್ಡಮ್ ಅವರು ಗಗ್ಗರಸೇವೆ ನಡೆಸಿಕೊಟ್ಟರು. ಮಳೆಯಲ್ಲೇ ನಡೆಯುತ್ತಿರುವ ನೇಮೋತ್ಸವದ ದೃಶ್ಯಗಳು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆದಿದೆ.

ದೈವರಾಧಕರು ಮತ್ತು ಭಕ್ತರು  ನೇಮೋತ್ಸವದಲ್ಲಿ ಭಾಗಿಯಾಗಿ ಆರಾಧನೆಯಲ್ಲಿ ಯಾವುದೇ ಲೋಪ ಬಾರದಂತೆ ನೋಡಿಕೊಂಡರು.  ತುಳುನಾಡಿನಲ್ಲಿ ಈ ವರ್ಷದಲ್ಲಿ ನಡೆಯುವ ಬಬ್ಬು ಸ್ವಾಮಿ ದೈವದ ಕೊನೆಯ ಕೋಲ ಇದು ಎಂದು ಹೇಳಲಾಗುತ್ತಿದೆ..