ಕಾರವಾರ : ಮಂಗಳೂರು-ಬೆಂಗಳೂರು ರೈಲು ಮಾರ್ಗದಲ್ಲಿ ಎಡಕುಮರಿ ಹಾಗೂ ಕಡಗರವಳ್ಳಿ ನಡುವೆ ಪಶ್ಚಿಮಘಟ್ಟದ ಗುಡ್ಡ ಕುಸಿತವಾಗಿದೆ.
ಹೀಗಾಗಿ ರವಿವಾರದಂದು ಕೊಂಕಣ ರೈಲು ಮಾರ್ಗದಲ್ಲಿ ಕಾರವಾರ ಹಾಗೂ ಬೆಂಗಳೂರು ನಡುವೆ ಸಂಚರಿಸುವ ಎಲ್ಲಾ ರೈಲುಗಳನ್ನು ರದ್ದು ಪಡಿಸಲಾಗಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.
ರೈಲು ನಂ.16585 ಸರ್ ಎಂ.ವಿಶ್ವೇಶ್ವರಯ್ಯ ಬೆಂಗಳೂರು ಹಾಗೂ ಮುರ್ಡೇಶ್ವರ ನಡುವಿನ ಎಕ್ಸೆಸ್ ಕ್ರೈಸ್ ರೈಲಿನ ಸಂಚಾರವನ್ನು ಜುಲೈ 28ರಂದು ಸಂಪೂರ್ಣ ರದ್ದುಪಡಿಸಲಾಗಿದೆ. ಅದೇ ರೀತಿ ಮುರ್ಡೇಶ್ವರ ಹಾಗೂ ಸರ್ ಎಂ.ವಿಶ್ವೇಶ್ವರಯ್ಯ ಬೆಂಗಳೂರು ನಡುವಿನ ರೈಲು ನಂ.16586 ಎಕ್ಸ್ಪ್ರೆಸ್ ರೈಲಿನ ಸಂಚಾರವನ್ನು 28 ರವಿವಾರ ಹಾಗೂ 29 ಸೋಮವಾರ ಸಂಪೂರ್ಣವಾಗಿ ರದ್ದು ಪಡಿಸಲಾಗಿದೆ.
ಜುಲೈ 28ರ ರವಿವಾರ ಪ್ರಾರಂಭಗೊಳ್ಳಬೇಕಿದ್ದ ರೈಲು ನಂ.06567 ಸರ್ ಎಂ.ವಿಶ್ವೇಶ್ವರಯ್ಯ ಬೆಂಗಳೂರು ಹಾಗೂ ಕಾರವಾರ ನಡುವಿನ ಸಂಚಾರವನ್ನು ರದ್ದು ಪಡಿಸಿದ್ದರೆ, ಅದೇ ದಿನದ ರೈಲು ನಂ.06568 ಕಾರವಾರ-ಸರ್ ಎಂ. ವಿಶ್ವೇಶ್ವರಯ್ಯ ಬೆಂಗಳೂರು ಎಕ್ಸ್ಪ್ರೆಸ್ ರೈಲಿನ ಸಂಚಾರವೂ ರದ್ದುಗೊಂಡಿದೆ.
ರೈಲು ನಂ.16595 ಕೆಎಸ್ಆರ್ ಬೆಂಗಳೂರು-ಕಾರವಾರ ಎಕ್ಸ್ಪ್ರೆಸ್ ರೈಲಿನ ಜುಲೈ 27 ಶನಿವಾರ ಹಾಗೂ ಜುಲೈ 28 ರವಿವಾರದ ಸಂಚಾರ ರದ್ದು ಗೊಂಡಿದೆ. ಹಾಗೆಯೇ ರೈಲು ನಂ.16596 ಕಾರವಾರ-ಕೆಎಸ್ಆರ್ ಬೆಂಗಳೂರು ಎಕ್ಸ್ಪ್ರೆಸ್ ರೈಲಿನ ಜುಲೈ 27 ಮತ್ತು ಜುಲೈ 28ರ ಸಂಚಾರವೂ ಸಂಪೂರ್ಣ ರದ್ದಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.