ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news): ಚಿಕ್ಕಮಗಳೂರು(Chikamangalore) : ಮೊನ್ನೆಯಷ್ಟೇ ನಕ್ಸಲರು ಸಿಎಂ ಮುಂದೆ ಶರಣರಾದ ಬಳಿಕ ಅವರು ಶಸ್ತ್ರಾಸ್ತ್ರಗಳನ್ನ ಒಪ್ಪಿಸಿಲ್ಲ ಎಂಬ ಚರ್ಚೆ ನಡೆಯುತ್ತಿತ್ತು. ಇದೀಗ ಕೊಪ್ಪ (Koppa) ತಾಲೂಕಿನ ಜಯಪುರ ಪೊಲೀಸ್‌ ಠಾಣಾ(Jayapura Police Station) ವ್ಯಾಪ್ತಿಯಲ್ಲಿರುವ ಕಿತ್ತಲೆಗಂಡಿ ಕಾಡಿನಲ್ಲಿ(Kittalegandi Forest) ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ. ಅವುಗಳು  ಶರಣಾಗಿರುವ ನಕ್ಸಲರು ಅಡಗಿಸಿಟ್ಟಿದ್ದ ಶಸ್ತ್ರಾಸ್ತ್ರಗಳು(Weapons) ಎಂದು ಹೇಳಲಾಗುತ್ತಿದೆ.

ಒಂದು ಎಕೆ-47(Ak 47), ಐದು 303 ಕೋವಿ, ಒಂದು ಪಿಸ್ತೂಲ್, 100ಕ್ಕೂ ಹೆಚ್ಚು ಗುಂಡುಗಳು ಮೇಗೂರು ಅರಣ್ಯ(Meguru Forest) ವ್ಯಾಪ್ತಿಯ ಕಿತ್ತಲೆಗಂಡಿ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿವೆ. ಶಸ್ತ್ರಾಸ್ತ್ರ ಕಾಯ್ದೆ ಅಡಿಯಲ್ಲಿ ಅಪರಿಚಿತರ ಆಯುಧಗಳು ಎಂದು ಜಯಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪೊಲೀಸರು 6 ಮಂದಿ ನಕ್ಸಲರನ್ನು ರಾಷ್ಟ್ರೀಯ ತನಿಖಾ ದಳದ (National Investigation Agency)ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸುವ ಮೊದಲು ಶಸ್ತ್ರಾಸ್ತ್ರಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡಿದ್ದರು. ಕೆಲವರು ಅರಣ್ಯದ ರಹಸ್ಯ ಸ್ಥಳದಲ್ಲಿ ಅಡಗಿಸಿ ಇಟ್ಟಿರುವುದಾಗಿ ತಿಳಿದುಬಂದಿತ್ತು. ಈ ಸ್ಥಳಗಳ ಮಾಹಿತಿ ಪೊಲೀಸರಿಗೆ ಇರಲಿಲ್ಲ. ಹೀಗಾಗಿ ಪೊಲೀಸರು ಬಾಡಿ ವಾರಂಟ್ ಪಡೆದು ಅವರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ ಬಳಿಕ ಶಸ್ತ್ರಾಸ್ತ್ರ ವಶಕ್ಕೆ ಪಡೆಯಲಿದ್ದಾರೆ ಎನ್ನಲಾಗಿತ್ತು. ಇದೀಗ ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ. ನಕ್ಸಲರ ಕಾರ್ಯಸ್ಥಾನವಾಗಿರುವ ಪ್ರದೇಶದಲ್ಲಿ ಸಿಕ್ಕಿರುವುದರಿಂದ  ಅವರದ್ದಿರಬಹುದು ಎಂದು ಶಂಕಿಸಲಾಗಿದೆ. ಪೊಲೀಸರು ಅಧಿಕೃತವಾಗಿ ಹೇಳುವುದಷ್ಟೇ ಬಾಕಿ ಉಳಿದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೂ ಗೃಹ ಸಚಿವ ಜಿ.ಪರಮೇಶ್ವರ ಅವರ ಎದುರು ಬುಧವಾರ ರಾತ್ರಿ ಮುಂಡಗಾರು ಲತಾ, ಸುಂದರಿ ಕುತ್ತೂರು, ವನಜಾಕ್ಷಿ ಬಾಳೆಹೊಳೆ, ಟಿ.ಎನ್‌. ಜಿಶಾ, ಕೆ.ವಸಂತ್, ಮಾರೆಪ್ಪ ಅರೋಲಿ ಶರಣಾಗಿದ್ದು, ಅವರನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಚಿಕ್ಕಮಗಳೂರು(Chikamangalore) ಜಿಲ್ಲೆಯ ಕೊಪ್ಪ ಡಿವೈಎಸ್‌ಪಿ ಬಾಲಾಜಿ ಸಿಂಗ್ ಅವರ ನೇತ್ವತ್ವದಲ್ಲಿ ಗುರುವಾರ ನಗರದಲ್ಲಿರುವ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಆರು ಮಂದಿಯನ್ನು ಜನವರಿ 30ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ನಂತರ ಪೊಲೀಸರು 6 ಮಂದಿ ನಕ್ಸಲರನ್ನು ಬಿಗಿ ಭದ್ರತೆ ನಡುವೆ ಗುರುವಾರ ರಾತ್ರಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿಟ್ಟಿದ್ದಾರೆ. ಆರು ಮಂದಿ ನಕ್ಸಲರ ವಿರುದ್ಧವೂ ‘ಕಾನೂನು ಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯ್ದೆ(ಯುಎಪಿಎ) ಅಡಿ ಪ್ರಕರಣ ದಾಖಲಾಗಿದೆ.

ಇದನ್ನು ಓದಿ : ಬೈಕ್ ಗೆ ಡಿಕ್ಕಿ ಹೊಡೆದ ರಭಸಕ್ಕೆ ವಾಹನಕ್ಕೆ ಬೆಂಕಿ.

ಉದ್ಯಮಿ ಕಿಡ್ನಾಪ್ ಪ್ರಕರಣ. ನಟೋರಿಯಸ್ ಕಿಡ್ನಾಪರ್ಸ್ ಮೇಲೆ ಪೊಲೀಸರ ಪೈರಿಂಗ್.

ಶಾಲೆಯಲ್ಲಿ ಮೂರು ವರ್ಷದ ಮತ್ತೋರ್ವ ಬಾಲಕಿ ಹೃದಯಘಾತದಿಂದ ಸಾವು.

ನಾಡದೋಣಿ ತಂದು ಪ್ರತಿಭಟಿಸಿದ ಸಾಂಪ್ರದಾಯಿಕ ಮೀನುಗಾರರು.