ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news)ಮುಂಬೈ(Mumbai): ಪ್ರಧಾನಿ ನರೇಂದ್ರ ಮೋದಿ(Narendra Modi) ಸೆಪ್ಟೆಂಬರ್‌ನಲ್ಲಿ ನಿವೃತ್ತರಾಗುತ್ತಿದ್ದರೆಂಬ ಸುದ್ದಿ ಹರಡಿದೆ.  ನಾಗ್ಪುರದಲ್ಲಿರುವ ಆರ್‌ಎಸ್‌ಎಸ್ (RSS) ಪ್ರಧಾನ ಕಚೇರಿಗೆ ಭೇಟಿ ನೀಡಿದ ಅವರು ನಿವೃತ್ತಿಗೆ ಅರ್ಜಿ ನೀಡಿದ್ದಾರೆ ಎನ್ನಲಾಗಿದೆ

ಅದಕ್ಕೆ ಸಂಬಂಧಿಸಿ  ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್(Sanjay Ravat) ಅವರ ಹೇಳಿಕೆಯೊಂದನ್ನ ನೀಡಿದ್ದು ರಾಜಕೀಯ ವಲಯದಲ್ಲಿ ಬಾರೀ ಚರ್ಚೆಗೆ ಕಾರಣವಾಗಿದೆ. ಕಳೆದ ದಶಕಗಳಿಂದ ಪ್ರಧಾನಿ ಮೋದಿ ಆರ್‌ಎಸ್‌ಎಸ್ ಪ್ರಧಾನ ಕಚೇರಿಗೆ ಭೇಟಿ ನೀಡಿಲ್ಲ.  ಆದರೀಗ  ಮುಖ್ಯಸ್ಥ ಮೋಹನ್ ಭಾಗವತ್(Mohan Bhagawat) ಅವರಿಗೆ “ಟಾಟಾ, ಬೈ, ಬೈ” ಹೇಳಲು ಹಾಗೆ ಮಾಡಿದ್ದಾರೆ ಎಂದು ರಾವತ್ ಹೇಳಿದ್ದಾರೆ.

“ಸೆಪ್ಟೆಂಬರ್ ಮೇ ನಿವೃತ್ತಿ ಕಾ ಅರ್ಜಿ ಲಿಖ್ನೆ ಕೆ ಲಿಯೇ ಶಾಯದ್ ವೋ ಆರ್‌ಎಸ್‌ಎಸ್ ಮುಖ್ಯಾಲಯ ಗಯೇ  ಎಂದು ರಾವತ್ ಹೇಳಿದ್ದಾರೆ.  ಆರ್‌ಎಸ್‌ಎಸ್ ದೇಶದ ನಾಯಕತ್ವದಲ್ಲಿ ಬದಲಾವಣೆಯನ್ನು ಬಯಸುತ್ತದೆ ಎಂದು ಅವರು ನಂಬುತ್ತಾರೆ. “ನಾನು ಅರ್ಥಮಾಡಿಕೊಂಡಂತೆ ಇಡೀ ಸಂಘ ಪರಿವಾರವು ದೇಶದ ನಾಯಕತ್ವದಲ್ಲಿ ಬದಲಾವಣೆಯನ್ನು ಬಯಸುತ್ತದೆ. ಪ್ರಧಾನಿ ಮೋದಿಯವರ ಸಮಯ ಮುಗಿದಿದೆ ಮತ್ತು ಅವರು ಬದಲಾವಣೆಯನ್ನು ಬಯಸುತ್ತಾರೆ ಮತ್ತು ಅವರು ಮುಂದಿನ ಬಿಜೆಪಿ ಮುಖ್ಯಸ್ಥರನ್ನು ಆಯ್ಕೆ ಮಾಡಲು ಬಯಸುತ್ತಾರೆ” ಎಂದು ರಾವತ್ ಮುಂಬೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿಕೆ ನೀಡಿದ್ದಾರೆ.

 ಹಿರಿಯ ಬಿಜೆಪಿ ನಾಯಕ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಸಂಜಯ್ ರಾವತ್ ಅವರ ಹೇಳಿಕೆಗಳನ್ನು ನಿರಾಕರಿಸಿದ್ದು, ಪ್ರಧಾನಿ ಮೋದಿ ಇನ್ನೂ ಹಲವು ವರ್ಷಗಳ ಕಾಲ ದೇಶವನ್ನು ಮುನ್ನಡೆಸುತ್ತಾರೆ ಎಂದು ಪ್ರತಿಪಾದಿಸಿದರು. ಮೋದಿಯವರ ಆಡಳಿತ ಇನ್ನಷ್ಟು ವರ್ಷಗಳ ಕಾಲ ಬೇಕು ಎಂದು ವಿವಿಧ ಮುಖಂಡರು ವಿಶ್ಲೇಷಿಸಿದ್ದಾರೆ.

ಇದನ್ನು ಓದಿ : ಕಾರ್ಮಿಕನ ಕಾಲಿಗೆ ಕಚ್ಚಿ ಗಾಯಗೊಳಿಸಿದ ಕೋತಿ.  ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲು

ತರಬೇತಿ ಪಡೆದ ಪೊಲೀಸರ ನೆಚ್ಚಿನ ಬಾಬು ಅವರಿಗೆ ಮುಖ್ಯಮಂತ್ರಿ ಪದಕ.