ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) : ಉತ್ತರಪ್ರದೇಶ : ತನ್ನ ಪತಿ ಮತ್ತು ಆರು ಮಕ್ಕಳನ್ನು ಬಿಟ್ಟು ಮಹಿಳೆಯೊಬ್ಬಳು ಭಿಕ್ಷುಕನ ಜತೆ ಓಡಿ ಹೋದ ಘಟನೆ ಉತ್ತರಪ್ರದೇಶದ ಹರ್ದೋಯ್ ಜಿಲ್ಲೆಯಲ್ಲಿ ನಡೆದಿದೆ.
ಆಕೆಯ ಪತಿ ರಾಜು ಎಂಬಾತ ತನ್ನ ಹೆಂಡತಿಯನ್ನು ಯಾರೋ ಕಿಡಿಗೇಡಿ ಕಿಡ್ನಾಪ್ ಮಾಡಿರುವುದಾಗಿ ಪೊಲೀಸರಿಗೆ ದೂರು ನೀಡಿದ್ದಾನೆ. ಪತ್ನಿಯನ್ನು ಹುಡುಕಿ ಕೊಡಿ ಎಂದು ಪೊಲೀಸರ ಬಳಿ ಕಣ್ಣೀರಿಟ್ಟಿದ್ದಾನೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯ ಶೋಧಕ್ಕೆ ಬಲೆ ಬೀಸಿದ್ದಾರೆ.
ನನ್ನ ಪತ್ನಿ ಹೆಸರು ರಾಜೇಶ್ವರಿ. ನಮ್ಮಿಬ್ಬರಿಗೆ ಆರು ಮಕ್ಕಳಿದ್ದಾರೆ. ಹರ್ದೋಯ್ನ ಹರ್ಪಾಲ್ಪುರ ಪ್ರದೇಶದಲ್ಲಿ ನಾವು ವಾಸಿಸುತ್ತಿದ್ದೆವು. ಪಂಡಿತ್ ಎಂಬ ವ್ಯಕ್ತಿ ಆಗಾಗ್ಗೆ ನಾವಿರುವ ಸ್ಥಳಕ್ಕೆ ಭಿಕ್ಷೆ ಬೇಡಲು ಬರುತ್ತಿದ್ದ. ಆತ ಬಂದಾಗ ನನ್ನ ಹೆಂಡತಿ ಹರಟೆ. ತಮಾಷೆಮಾಡುತ್ತಿದ್ದಳು. ಅವರಿಬ್ಬರು ಒಮ್ಮೊಮ್ಮೆ ದೂರವಾಣಿ ಕರೆಯಲ್ಲಿ ಮಾತನಾಡುತ್ತಿದ್ದರು. ಹೀಗಾಗಿ ಆತನೇ ಓಡಿಸಿಕೊಂಡು ಹೋಗಿರಬೇಕು ಎಂದು ರಾಜು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾನೆ.
ಜನವರಿ ಮುರರ ಮಧ್ಯಾಹ್ನ ಸುಮಾರಿಗೆ ನನ್ನ ಪತ್ನಿ ರಾಜೇಶ್ವರಿ, ನಮ್ಮ ಮಗಳು ಖುಷಿಗೆ ಬಟ್ಟೆ, ತರಕಾರಿ ಖರೀದಿಸಲು ಮಾರುಕಟ್ಟೆಗೆ ಹೋಗುವುದಾಗಿ ಹೇಳಿ ಹೋದಳು. ಎಷ್ಟೇ ಸಮಯವಾದರೂ ಆಕೆ ಮನೆಗೆ ಹಿಂತಿರುಗದೆ ಇದ್ದಾಗ ನಾನು ನಗರದ ಸುತ್ತಮುತ್ತ ಸೇರಿದಂತೆ ಎಲ್ಲಾ ಕಡೆ ಹುಡುಕಾಡಿದರೂ ಪತ್ನಿಯ ಸುಳಿವು ಸಿಗಲಿಲ್ಲ. ನಾನು ಎಮ್ಮೆಯನ್ನು ಮಾರಿ ಮನೆಯಲ್ಲಿ ಇರಿಸಿದ್ದ ಹಣದ ಸಮೇತ ಪತ್ನಿ ಪರಾರಿಯಾಗಿದ್ದಾಳೆ. ನನ್ನ ಪ್ರಕಾರ, ಆಕೆ ನನ್ನೆ ಪಂಡಿತ್ ಜತೆ ಓಡಿ ಹೋಗಿದ್ದಾಳೆ ಎಂಬ ಶಂಕೆ ಇದೆ. ದಯವಿಟ್ಟು ಆಕೆಯನ್ನು ಹುಡುಕಿ ಕೊಡಿ ಎಂದು ರಾಜು ದೂರಿನಲ್ಲಿ ತಿಳಿಸಿದ್ದಾರೆ. ನನ್ನೆ ಪಂಡಿತ್ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಭಿಕ್ಷುಕನ ಹಣದ ಆಸೆಗೆ ಮಹಿಳೆ ಓಡಿ ಹೋದಳಾ ಎಂಬ ಪ್ರಶ್ನೆ ಊರಿನಲೆಲ್ಲಾ ಗುಲ್ಲೆದ್ದಿದೆ.
ಇದನ್ನು ಓದಿ : ಮುಖ್ಯವಾಹಿನಿಗೆ ಬರುವ ಮನಸ್ಸು. ಶರಣಾಗಲು ಬಯಸಿದ ನಕ್ಸಲರು.
ನಾಲ್ವರು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ.